ಬ್ರೇಕಿಂಗ್ ನ್ಯೂಸ್
24-04-23 04:40 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.24: ಮಾಜಿ ಸಚಿವ ಗಂಗಾಧರ ಗೌಡರ ಮನೆಗೆ ದಾಳಿ ನಡೆಸಿದ ಐಟಿ ಇಲಾಖೆಯ ಅಧಿಕಾರಿಗಳು 30 ಲಕ್ಷ ನಗದು ಪತ್ತೆ ಮಾಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಗಂಗಾಧರ ಗೌಡರ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಗಂಗಾಧರ ಗೌಡರು ಹಿಂದೆ ಕಾಂಗ್ರೆಸ್ ನಲ್ಲಿದ್ದು ಶಾಸಕ, ಸಚಿವರಾಗಿ, ಆನಂತರ ಒಮ್ಮೆ ಜೆಡಿಎಸ್ ಸೇರಿ, ಒಂದಷ್ಟು ಕಾಲ ಬಿಜೆಪಿಯಲ್ಲಿದ್ದು ಬಳಿಕ ಮತ್ತೆ ಕಾಂಗ್ರೆಸ್ ಸೇರಿ ಅದೇ ಪಕ್ಷದಲ್ಲಿದ್ದಾರೆ. 1980ರ ಕಾಲದಲ್ಲಿ ಇಂದಿರಾ ಕಾಂಗ್ರೆಸಿಗನಾಗಿ ಹೆಸರು ಮಾಡಿದ್ದವರು ಗಂಗಾಧರ ಗೌಡರು. ಆದರೆ ಈ ಬಾರಿಯ ಚುನಾವಣೆಯಲ್ಲಿ ತಾನೇ ಕಾಂಗ್ರೆಸಿನಿಂದ ಸ್ಪರ್ಧಿಸುತ್ತೇನೆ ಎಂದು ತಮ್ಮ ಇಳಿ ವಯಸ್ಸಿನಲ್ಲೂ ತೊಡೆ ತಟ್ಟಿದ್ದರು. ಪಕ್ಷದಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಪ್ರಚಾರದಲ್ಲಾಗಲೀ, ಪಕ್ಷದ ಚಟುವಟಿಕೆಯಲ್ಲಾಗಲೀ ಕಾಣಿಸಿಕೊಂಡಿಲ್ಲ. ಈ ಬಾರಿ ತನಗೆ ಅಥವಾ ತನ್ನ ಮಗನಿಗೆ ಅದೂ ಆಗದಿದ್ದರೆ, ವಸಂತ ಬಂಗೇರ ಅವರಿಗೇ ಟಿಕೆಟ್ ನೀಡುವಂತೆ ಗಂಗಾಧರ ಗೌಡ ಆಗ್ರಹ ಮಾಡಿದ್ದರು.

ಇಂದಬೆಟ್ಟುವಿನಲ್ಲಿ ಮನೆ, ಬೆಳ್ತಂಗಡಿಯ ಲಾಯ್ಲದಲ್ಲಿ ಪ್ರಸನ್ನ ಶಿಕ್ಷಣ ಸಂಸ್ಥೆಗಳು, ಆಯುರ್ವೇದ ಕಾಲೇಜು ಇನ್ನಿತರ ಆಸ್ತಿಗಳು ಗಂಗಾಧರ ಗೌಡರ ಹೆಸರಲ್ಲಿವೆ. ಐಟಿ ಅಧಿಕಾರಿಗಳ ದಾಳಿಯಲ್ಲಿ 30 ಲಕ್ಷ ನಗದು ಹಣ ಸಿಕ್ಕರೂ, ಅದಕ್ಕೆ ದಾಖಲೆ ತೋರಿಸುವಷ್ಟು ಅಡಿಕೆ ತೋಟ, ಶಿಕ್ಷಣ ಸಂಸ್ಥೆಗಳಿವೆ. ಹೀಗಾಗಿ 30 ಲಕ್ಷವೆಲ್ಲ ದೊಡ್ಡ ವಿಚಾರ ಅಲ್ಲ ಎಂದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುತ್ತಾರೆ. ಆದರೆ ಕಾಂಗ್ರೆಸಿನಲ್ಲಿದ್ದುಕೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವಾಗ ಬಿಜೆಪಿ ಆಡಳಿತದಲ್ಲಿ ಐಟಿ ಅಧಿಕಾರಿಗಳ ದಾಳಿ ಹೇಗೆ ನಡೆದಿದೆ, ಇದರಲ್ಲಿ ಕಾಂಗ್ರೆಸಿಗರದ್ದೇ ಕೈವಾಡ ಇರಬಹುದೇ ಎಂದು ಗಂಗಾಧರ ಗೌಡರ ಜೊತೆಗಿದ್ದವರು ತಲೆಕೆಡಿಸಿಕೊಂಡಿದ್ದಾರೆ.
ಮಾಜಿ ಸಚಿವ ಗಂಗಾಧರ ಗೌಡರಿಗೆ ಐಟಿ ಶಾಕ್ ; ಬೆಳ್ತಂಗಡಿಯ ಶಿಕ್ಷಣ ಸಂಸ್ಥೆ, ಮನೆಯಲ್ಲಿ ಪರಿಶೀಲನೆ
Belthangady Income tax raid on Congress leader Gangadhar Gowda house, 30 lakhs cash seized by officals. Gowda had quit the BJP and joined Congress in 2018. He recently announced withdrawal from politics following the denial of a ticket for the Karnataka Assembly polls.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm