ಬ್ರೇಕಿಂಗ್ ನ್ಯೂಸ್
26-04-23 08:45 pm Mangalore Correspondent ಕರಾವಳಿ
ಮಂಗಳೂರು, ಎ.26: ಕರಾವಳಿಯಲ್ಲಿ ಚುನಾವಣೆ ಭರಾಟೆ ಜೋರಾಗಿದ್ದು, ಕಾಂಗ್ರೆಸ್ – ಬಿಜೆಪಿ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ಪ್ರಚಾರಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರೆ, ಪಕ್ಷದ ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರು ರ್ಯಾಲಿ, ರೋಡ್ ಶೋ ಮೂಲಕ ಮತ ಸೆಳೆಯುತ್ತಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಪ್ರಿಲ್ 27ರಂದು ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 4.30ಕ್ಕೆ ಅಡ್ಯಾರ್ ನಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಮಂಗಳೂರು ನಗರದ ಬಲ್ಮಠ, ಕಲೆಕ್ಟರ್ ಗೇಟ್ ನಡುವೆ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ನಗರ ಮಧ್ಯೆ ರೋಡ್ ಶೋ ನಡೆಸುವುದಕ್ಕೆ ಅವಕಾಶ ಸಿಗದ ಕಾರಣ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದೆ. ಪ್ರಚಾರ ಸಭೆ ನಡೆಯೋದಕ್ಕೂ ಮುನ್ನ ಅಡ್ಯಾರ್ ನಲ್ಲಿ ಹೆದ್ದಾರಿ ಉದ್ದಕ್ಕೆ ಒಂದಷ್ಟು ರೋಡ್ ಶೋ ನಡೆಯುವ ಸಾಧ್ಯತೆ ಇದೆ.
ಎಪ್ರಿಲ್ 29ರಂದು ಮಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸಲಿದ್ದು, ಉರ್ವಾದಿಂದ ನಾರಾಯಣ ಗುರು ವೃತ್ತದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ತೆರೆದ ವಾಹನದಲ್ಲಿ ಅಮಿತ್ ಷಾ ಮೆರವಣಿಗೆ ತೆರಳಲಿದ್ದು, ಸಾವಿರಾರು ಕಾರ್ಯಕರ್ತರು ಸೇರಲಿದ್ದಾರೆ. ವಾಹನದಲ್ಲಿ ನಿಂತುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಅಮಿತ್ ಷಾ ಮಾತನಾಡಲಿದ್ದಾರೆ. ಪೆಂಡಾಲ್ ಹಾಕಿ ದೊಡ್ಡ ಮಟ್ಟದ ಪ್ರಚಾರ ಸಭೆ ನಡೆಸಿದಲ್ಲಿ ಅದರ ಖರ್ಚು ಅಭ್ಯರ್ಥಿಯ ಲೆಕ್ಕಕ್ಕೆ ಬರುವುದರಿಂದ ಈ ರೀತಿ ರೋಡ್ ಶೋ ಮೂಲಕ ಸಣ್ಣ ಖರ್ಚಿನಲ್ಲಿ ದೊಡ್ಡ ಸಭೆಯನ್ನುದ್ದೇಶಿಸಿ ಮಾತನಾಡುವಂತೆ ವ್ಯವಸ್ಥೆ ಮಾಡಲಾಗಿದೆ.
Congress Election campaign Rahul Gandhi in Mangalore on April 27th, Amit Shah on April 29th, BJP Road show organized. Rahul will address the Congress Party Workers at a mass poll campaign meeting at 3.30 pm to be held at the Sahyadri College Campus in Adyar, in the outskirts of the City. Home Minister Amith Shah is likely to hold a Roadshow in Mangaluru on 29th.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm