ಬ್ರೇಕಿಂಗ್ ನ್ಯೂಸ್
26-04-23 08:45 pm Mangalore Correspondent ಕರಾವಳಿ
ಮಂಗಳೂರು, ಎ.26: ಕರಾವಳಿಯಲ್ಲಿ ಚುನಾವಣೆ ಭರಾಟೆ ಜೋರಾಗಿದ್ದು, ಕಾಂಗ್ರೆಸ್ – ಬಿಜೆಪಿ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ಪ್ರಚಾರಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರೆ, ಪಕ್ಷದ ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರು ರ್ಯಾಲಿ, ರೋಡ್ ಶೋ ಮೂಲಕ ಮತ ಸೆಳೆಯುತ್ತಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಪ್ರಿಲ್ 27ರಂದು ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 4.30ಕ್ಕೆ ಅಡ್ಯಾರ್ ನಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಮಂಗಳೂರು ನಗರದ ಬಲ್ಮಠ, ಕಲೆಕ್ಟರ್ ಗೇಟ್ ನಡುವೆ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ನಗರ ಮಧ್ಯೆ ರೋಡ್ ಶೋ ನಡೆಸುವುದಕ್ಕೆ ಅವಕಾಶ ಸಿಗದ ಕಾರಣ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದೆ. ಪ್ರಚಾರ ಸಭೆ ನಡೆಯೋದಕ್ಕೂ ಮುನ್ನ ಅಡ್ಯಾರ್ ನಲ್ಲಿ ಹೆದ್ದಾರಿ ಉದ್ದಕ್ಕೆ ಒಂದಷ್ಟು ರೋಡ್ ಶೋ ನಡೆಯುವ ಸಾಧ್ಯತೆ ಇದೆ.
ಎಪ್ರಿಲ್ 29ರಂದು ಮಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸಲಿದ್ದು, ಉರ್ವಾದಿಂದ ನಾರಾಯಣ ಗುರು ವೃತ್ತದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ತೆರೆದ ವಾಹನದಲ್ಲಿ ಅಮಿತ್ ಷಾ ಮೆರವಣಿಗೆ ತೆರಳಲಿದ್ದು, ಸಾವಿರಾರು ಕಾರ್ಯಕರ್ತರು ಸೇರಲಿದ್ದಾರೆ. ವಾಹನದಲ್ಲಿ ನಿಂತುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಅಮಿತ್ ಷಾ ಮಾತನಾಡಲಿದ್ದಾರೆ. ಪೆಂಡಾಲ್ ಹಾಕಿ ದೊಡ್ಡ ಮಟ್ಟದ ಪ್ರಚಾರ ಸಭೆ ನಡೆಸಿದಲ್ಲಿ ಅದರ ಖರ್ಚು ಅಭ್ಯರ್ಥಿಯ ಲೆಕ್ಕಕ್ಕೆ ಬರುವುದರಿಂದ ಈ ರೀತಿ ರೋಡ್ ಶೋ ಮೂಲಕ ಸಣ್ಣ ಖರ್ಚಿನಲ್ಲಿ ದೊಡ್ಡ ಸಭೆಯನ್ನುದ್ದೇಶಿಸಿ ಮಾತನಾಡುವಂತೆ ವ್ಯವಸ್ಥೆ ಮಾಡಲಾಗಿದೆ.
Congress Election campaign Rahul Gandhi in Mangalore on April 27th, Amit Shah on April 29th, BJP Road show organized. Rahul will address the Congress Party Workers at a mass poll campaign meeting at 3.30 pm to be held at the Sahyadri College Campus in Adyar, in the outskirts of the City. Home Minister Amith Shah is likely to hold a Roadshow in Mangaluru on 29th.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm