ಬ್ರೇಕಿಂಗ್ ನ್ಯೂಸ್
26-04-23 08:56 pm Udupi Correspondent ಕರಾವಳಿ
ಉಡುಪಿ, ಎ.26: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ವಿಧಾನಸಭೆ ಕ್ಷೇತ್ರದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ಉಡುಪಿಗೆ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಕಾಪು ಮಹಾಲಕ್ಷ್ಮಿ ದೇವಸ್ಥಾನ ಬಳಿಯ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಇದಕ್ಕೂ ಮೊದಲು ಕಟಪಾಡಿ ಮತ್ತು ಮುಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ಕಾಪು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಬಿಜೆಪಿ ಸರಕಾರ ಪೂರ್ತಿಯಾಗಿ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಮೀನುಗಾರರಿಗೆ ಸೀಮೆ ಎಣ್ಣೆಯನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದ್ದರು. ಕಳೆದ ಆರು ತಿಂಗಳಲ್ಲಿ ಮೀನುಗಾರರಿಗೆ ಸಬ್ಸಿಡಿ ಸೀಮೆ ಎಣ್ಣೆ ಸಿಗುತ್ತಿಲ್ಲ. ಬಿಜೆಪಿಯವರು ಮೀನುಗಾರರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮೀನುಗಾರರ ಅಭಿವೃದ್ಧಿಗೆಂದೇ 2500 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಸೊರಕೆ ಹೇಳಿದರು.
ಬೈಂದೂರು, ಉಡುಪಿ, ಕಾಪು, ಮಂಗಳೂರು ಭಾಗದ ಸಾವಿರಾರು ಮೀನುಗಾರರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮೀನುಗಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ವಿಚಾರದಲ್ಲಿ ಪ್ರತ್ಯೇಕ ಯೋಜನೆಯನ್ನು ತಯಾರಿಸಲಾಗುವುದು. ರಾಜ್ಯದೆಲ್ಲೆಡೆಯಿಂದ ಎರಡು ಸಾವಿರ ಮಂದಿ ಮೀನುಗಾರ ಸಮುದಾಯದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮೀನುಗಾರರು ಅಂದರೆ ಕೇವಲ ಮೊಗವೀರರು ಮಾತ್ರ ಅಂದ್ಕೊಂಡಿದ್ದಾರೆ. ಮೀನುಗಾರಿಕೆಯಲ್ಲಿ ಎಸ್ಸಿ, ಎಸ್ಟಿಯಿಂದ ತೊಡಗಿ ಮುಸ್ಲಿಮರು ಇತರೇ ಸಮುದಾಯದವರು ಕೂಡ ತೊಡಗಿಸಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಕೇರಳ ಸಂಸದ ಪ್ರತಾಪನ್, ಮೀನುಗಾರ ಘಟಕದ ಅಧ್ಯಕ್ಷ ಮಂಜುನಾಥ ಸೋನೆಗರ್, ಕೆಪಿಸಿಸಿ ಸೆಕ್ರಟರಿ ಎಂ.ಎ. ಗಫೂರ್, ರಾಜಶೇಖರ ಕೋಟ್ಯಾನ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ ಕಿಣಿ ಮತ್ತಿತರರಿದ್ದರು.
Congress leader Rahul Gandhi will arrive in Uchila on Thursday, April 27, to discuss the problems of the fishermen community. After visiting a temple in Uchila, he will discuss with the members of the community, said Manjunath Songar, president of KPCC fishermen cell.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm