ಬ್ರೇಕಿಂಗ್ ನ್ಯೂಸ್
26-04-23 08:56 pm Udupi Correspondent ಕರಾವಳಿ
ಉಡುಪಿ, ಎ.26: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ವಿಧಾನಸಭೆ ಕ್ಷೇತ್ರದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ಉಡುಪಿಗೆ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಕಾಪು ಮಹಾಲಕ್ಷ್ಮಿ ದೇವಸ್ಥಾನ ಬಳಿಯ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಇದಕ್ಕೂ ಮೊದಲು ಕಟಪಾಡಿ ಮತ್ತು ಮುಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ಕಾಪು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಬಿಜೆಪಿ ಸರಕಾರ ಪೂರ್ತಿಯಾಗಿ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಮೀನುಗಾರರಿಗೆ ಸೀಮೆ ಎಣ್ಣೆಯನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದ್ದರು. ಕಳೆದ ಆರು ತಿಂಗಳಲ್ಲಿ ಮೀನುಗಾರರಿಗೆ ಸಬ್ಸಿಡಿ ಸೀಮೆ ಎಣ್ಣೆ ಸಿಗುತ್ತಿಲ್ಲ. ಬಿಜೆಪಿಯವರು ಮೀನುಗಾರರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮೀನುಗಾರರ ಅಭಿವೃದ್ಧಿಗೆಂದೇ 2500 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಸೊರಕೆ ಹೇಳಿದರು.
ಬೈಂದೂರು, ಉಡುಪಿ, ಕಾಪು, ಮಂಗಳೂರು ಭಾಗದ ಸಾವಿರಾರು ಮೀನುಗಾರರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮೀನುಗಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ವಿಚಾರದಲ್ಲಿ ಪ್ರತ್ಯೇಕ ಯೋಜನೆಯನ್ನು ತಯಾರಿಸಲಾಗುವುದು. ರಾಜ್ಯದೆಲ್ಲೆಡೆಯಿಂದ ಎರಡು ಸಾವಿರ ಮಂದಿ ಮೀನುಗಾರ ಸಮುದಾಯದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮೀನುಗಾರರು ಅಂದರೆ ಕೇವಲ ಮೊಗವೀರರು ಮಾತ್ರ ಅಂದ್ಕೊಂಡಿದ್ದಾರೆ. ಮೀನುಗಾರಿಕೆಯಲ್ಲಿ ಎಸ್ಸಿ, ಎಸ್ಟಿಯಿಂದ ತೊಡಗಿ ಮುಸ್ಲಿಮರು ಇತರೇ ಸಮುದಾಯದವರು ಕೂಡ ತೊಡಗಿಸಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಕೇರಳ ಸಂಸದ ಪ್ರತಾಪನ್, ಮೀನುಗಾರ ಘಟಕದ ಅಧ್ಯಕ್ಷ ಮಂಜುನಾಥ ಸೋನೆಗರ್, ಕೆಪಿಸಿಸಿ ಸೆಕ್ರಟರಿ ಎಂ.ಎ. ಗಫೂರ್, ರಾಜಶೇಖರ ಕೋಟ್ಯಾನ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ ಕಿಣಿ ಮತ್ತಿತರರಿದ್ದರು.
Congress leader Rahul Gandhi will arrive in Uchila on Thursday, April 27, to discuss the problems of the fishermen community. After visiting a temple in Uchila, he will discuss with the members of the community, said Manjunath Songar, president of KPCC fishermen cell.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm