ಬ್ರೇಕಿಂಗ್ ನ್ಯೂಸ್
26-04-23 08:56 pm Udupi Correspondent ಕರಾವಳಿ
ಉಡುಪಿ, ಎ.26: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ವಿಧಾನಸಭೆ ಕ್ಷೇತ್ರದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ಉಡುಪಿಗೆ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಕಾಪು ಮಹಾಲಕ್ಷ್ಮಿ ದೇವಸ್ಥಾನ ಬಳಿಯ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಇದಕ್ಕೂ ಮೊದಲು ಕಟಪಾಡಿ ಮತ್ತು ಮುಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ಕಾಪು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಬಿಜೆಪಿ ಸರಕಾರ ಪೂರ್ತಿಯಾಗಿ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಮೀನುಗಾರರಿಗೆ ಸೀಮೆ ಎಣ್ಣೆಯನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದ್ದರು. ಕಳೆದ ಆರು ತಿಂಗಳಲ್ಲಿ ಮೀನುಗಾರರಿಗೆ ಸಬ್ಸಿಡಿ ಸೀಮೆ ಎಣ್ಣೆ ಸಿಗುತ್ತಿಲ್ಲ. ಬಿಜೆಪಿಯವರು ಮೀನುಗಾರರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮೀನುಗಾರರ ಅಭಿವೃದ್ಧಿಗೆಂದೇ 2500 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಸೊರಕೆ ಹೇಳಿದರು.
ಬೈಂದೂರು, ಉಡುಪಿ, ಕಾಪು, ಮಂಗಳೂರು ಭಾಗದ ಸಾವಿರಾರು ಮೀನುಗಾರರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮೀನುಗಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ವಿಚಾರದಲ್ಲಿ ಪ್ರತ್ಯೇಕ ಯೋಜನೆಯನ್ನು ತಯಾರಿಸಲಾಗುವುದು. ರಾಜ್ಯದೆಲ್ಲೆಡೆಯಿಂದ ಎರಡು ಸಾವಿರ ಮಂದಿ ಮೀನುಗಾರ ಸಮುದಾಯದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮೀನುಗಾರರು ಅಂದರೆ ಕೇವಲ ಮೊಗವೀರರು ಮಾತ್ರ ಅಂದ್ಕೊಂಡಿದ್ದಾರೆ. ಮೀನುಗಾರಿಕೆಯಲ್ಲಿ ಎಸ್ಸಿ, ಎಸ್ಟಿಯಿಂದ ತೊಡಗಿ ಮುಸ್ಲಿಮರು ಇತರೇ ಸಮುದಾಯದವರು ಕೂಡ ತೊಡಗಿಸಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಕೇರಳ ಸಂಸದ ಪ್ರತಾಪನ್, ಮೀನುಗಾರ ಘಟಕದ ಅಧ್ಯಕ್ಷ ಮಂಜುನಾಥ ಸೋನೆಗರ್, ಕೆಪಿಸಿಸಿ ಸೆಕ್ರಟರಿ ಎಂ.ಎ. ಗಫೂರ್, ರಾಜಶೇಖರ ಕೋಟ್ಯಾನ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ ಕಿಣಿ ಮತ್ತಿತರರಿದ್ದರು.
Congress leader Rahul Gandhi will arrive in Uchila on Thursday, April 27, to discuss the problems of the fishermen community. After visiting a temple in Uchila, he will discuss with the members of the community, said Manjunath Songar, president of KPCC fishermen cell.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm