ಬ್ರೇಕಿಂಗ್ ನ್ಯೂಸ್
26-04-23 09:15 pm Mangalore Correspondent ಕರಾವಳಿ
ಮಂಗಳೂರು, ಎ.26: ರಾಜ್ಯದ ಜನತೆ ಬಿಜೆಪಿ ಆಡಳಿತದಿಂದ ಭ್ರಮನಿರಸನಗೊಂಡಿದ್ದು, ಕಾಂಗ್ರೆಸಿಗೆ ಪೂರ್ಣ ಬಹುಮತ ನೀಡಲು ನಿರ್ಧರಿಸಿದ್ದಾರೆ. ಈ ಬಾರಿ ಕಾಂಗ್ರೆಸ್ 2013ರ ಚುನಾವಣೆ ಫಲಿತಾಂಶದ ರೀತಿಯಲ್ಲೇ ಬಹುಮತ ಸಾಧಿಸಲಿದೆ ಎಂದು ಎಐಸಿಸಿ ಸೆಕ್ರಟರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮೋದಿಗಾಗಿ ಕರ್ನಾಟಕದ ಜನತೆ ಮತ ನೀಡುತ್ತಾರೆಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಯನ್ನು ಖಂಡಿಸಿದ್ದಲ್ಲದೆ, ಹಾಗಾದರೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ್ದು ಯಾರು? 2018ರ ಚುನಾವಣೆಯಲ್ಲಿ ಬಿಜೆಪಿಯನ್ನು ಜನ ಮತ ನೀಡಿ ಆಯ್ಕೆ ಮಾಡಿರಲಿಲ್ಲ. ಇವರು ಕುದುರೆ ವ್ಯಾಪಾರದಿಂದ ಅಧಿಕಾರಕ್ಕೆ ಬಂದಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದರೂ, ಸರಿಯಾಗಿ ಆಡಳಿತ ನಡೆಸಲಿಲ್ಲ. ಭರಪೂರ ಭ್ರಷ್ಟಾಚಾರವನ್ನೇ ತಮ್ಮ ಆಡಳಿತ ಮಾಡಿಕೊಂಡಿತ್ತು. ನಲ್ವತ್ತು ಪರ್ಸೆಂಟ್ ಸರಕಾರ ಅನ್ನುವ ಕಳಂಕ ರಾಜ್ಯಕ್ಕೆ ಅಂಟಿಕೊಳ್ಳುವ ಸ್ಥಿತಿ ಬಂದಿತ್ತು. ಇದು ರಾಜ್ಯದ ಜನರಿಗೆ ತಟ್ಟಿದ ಕಳಂಕ ಎಂದು ಹೇಳಿದರು.
ಮುಖ್ಯಮಂತ್ರಿ ಬೊಮ್ಮಾಯಿ ಭ್ರಷ್ಟಾಚಾರದಲ್ಲಿ ದಾಖಲೆಯನ್ನೇ ಮಾಡಿದ್ದಾರೆ ಎಂದು ಆರೋಪಿಸಿದ ವೇಣುಗೋಪಾಲ್, ಬಿಜೆಪಿ ಸರಕಾರ ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರು. ಜನರ ನಡುವೆ ದ್ವೇಷ ಹೆಚ್ಚಿಸಿದ್ದು ಬಿಜೆಪಿ ಸಾಧನೆ. ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಲು ಇವರಿಂದ ಸಾಧ್ಯವಾಗಿಲ್ಲ. ಜನರು ಉದ್ಯೋಗ ಸಿಗದೆ, ನರಳುವ ಸ್ಥಿತಿಯಾಗಿದೆ. ಮಂಗಳೂರಿನ ಮಟ್ಟಿಗೆ ಹೇಳೋದಾದ್ರೆ, ಬಿಜೆಪಿ ಸರಕಾರದ ಕೊಡುಗೆ ಶೂನ್ಯ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮೊದಲ ಅಸೆಂಬ್ಲಿ ಸಭೆಯಲ್ಲೇ ನಾವು ನೀಡಿರುವ ಗ್ಯಾರಂಟಿ ಘೋಷಣೆಗಳನ್ನು ಕಾರ್ಯಗತ ಮಾಡುತ್ತೇವೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಇದಕ್ಕಾಗಿ ರಾಜ್ಯದ ಜನತೆ ಪೂರ್ಣ ಬಹುಮತದ ಸರ್ಕಾರ ನೀಡಬೇಕೆಂದು ಕೇಳಿಕೊಳ್ಳುತ್ತೇನೆ. ರಾಹುಲ್ ಗಾಂಧಿಯನ್ನು ಬಿಜೆಪಿ ಸರಕಾರ ಯಾವ ರೀತಿ ಹಿಂಸೆಗೀಡು ಮಾಡುವಂತೆ ಮಾಡಿತ್ತು ಅನ್ನೋದನ್ನು ಜನ ನೋಡಿದ್ದಾರೆ. ಆದರೂ ರಾಹುಲ್ ಗಾಂಧಿಯವರು ಸತ್ಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ಜನರಲ್ ಸೆಕ್ರಟರಿ ಪದ್ಮರಾಜ್ ರಾಮಯ್ಯ ಮತ್ತಿತರರಿದ್ದರು.
Mangalore People of state in favour of Congress rule, peopel have realised how corrupt BJP is slams K C Venugopal. Venugopal stated that the public in Karnataka has decided to bring the Congress to power and that people favor Congress. He claimed that with a complete majority, Congress would come to power, as the BJP is in a pitiable condition in the state, with no contribution to show for its governance.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm