ಬ್ರೇಕಿಂಗ್ ನ್ಯೂಸ್
26-04-23 10:28 pm Mangalore Correspondent ಕರಾವಳಿ
ಉಳ್ಳಾಲ, ಎ.26 : ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರನ್ನ ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆಂಬ ಪ್ರಕರಣ ಸಂಬಂಧಿಸಿ ಕೈ ಪಕ್ಷದ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಪುರಸಭೆಯ ಕಾಂಗ್ರೆಸಿನ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದು ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ.
ಅಲ್ತಾಫ್ ರನ್ನು ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Threat to Jds candiate Althaf Kumpala over nomination, files complaint to Ullal police station against Congress leaders. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team from the National Congress party.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm