ಬ್ರೇಕಿಂಗ್ ನ್ಯೂಸ್
26-04-23 10:40 pm Mangalore Correspondent ಕರಾವಳಿ
ಸುರತ್ಕಲ್, ಎ.26 : ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, "ಮಂಗಳೂರು ಉತ್ತರ ಕ್ಷೇತ್ರವನ್ನು ಭವಿಷ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಹೀಗಾಗಿ ಪ್ರತೀ ಮನೆಗಳನ್ನು ಕಾಂಗ್ರೆಸ್ ಗ್ಯಾರಂಟಿ ಅಭಿಯಾನದ ಮೂಲಕ ಜೋಡಿಸಲು ನಮ್ಮ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಜನರು ಬಿಜೆಪಿ ಸರಕಾರದ ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಹೊರೆಗಳಿಂದ ಕಂಗಾಲಾಗಿದ್ದಾರೆ. ಮತ್ತೊಮ್ಮೆ ಅದೇ ಸರಕಾರ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಏನಾಗಬಹುದು ಎಂಬ ಸ್ಪಷ್ಟ ಅಂದಾಜು ಜನರಲ್ಲಿದೆ. ಹೀಗಾಗಿ ಜನವಿರೋಧಿ ಬಿಜೆಪಿ ಸರಕಾರಕ್ಕೆ ಜನರೇ ವಿರುದ್ಧವಾಗಿದ್ದಾರೆ ಎಂದರು.






ಕಾಟಿಪಳ್ಳ ಜನತಾ ಕಾಲನಿಯ ಸಿರಿಗಳ ಬೀಡು, ಆಶ್ರಯ ಕಾಲನಿಯ ಕೊರಗಜ್ಜ ಕ್ಷೇತ್ರಕ್ಕೆ ಇನಾಯತ್ ಅಲಿ ಭೇಟಿ ಕೊಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ, ಜಲೀಲ್ ಬದ್ರಿಯಾ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.



ಬಾವಾ ಮಾತ್ರ ಹೋಗಿದ್ದಾರೆ, ಪಕ್ಷಕ್ಕೆ ಯಾವುದೇ ನಷ್ಟವಿಲ್ಲ!
"ಕಾಂಗ್ರೆಸ್ ಪಕ್ಷದಿಂದ ಮೊಯಿದೀನ್ ಬಾವಾ ಮಾತ್ರ ಹೊರಗಡೆ ಹೋಗಿದ್ದಾರೆ. ಅವರ ಜೊತೆ ವೈಯಕ್ತಿಕವಾಗಿ ಹಿಂದಿನಿಂದಲೂ ಇದ್ದ ಬೆರಳೆಣಿಕೆಯ ನಾಯಕರು ಅವರ ಜೊತೆಗಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಜನರು ಬೆಂಬಲ ನೀಡುವುದಿಲ್ಲ. ಬಾವಾ 500-1000 ಮತ ಪಡೆಯಬಹುದು. ನಾವು 10ಕ್ಕೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳಿದ್ದೆವು. ಪಕ್ಷ ನನಗೆ ಮಾತ್ರ ಟಿಕೆಟ್ ಕೊಟ್ಟಿದೆ. ಉಳಿದವರು ಇದಕ್ಕಾಗಿ ಪಕ್ಷ ತೊರೆದಿಲ್ಲ, ನನ್ನ ಜೊತೆ ದಿನಾ ಮನೆ ಮನೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಾವಾ ಪಕ್ಷ ತೊರೆದಿದ್ದರಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಇನಾಯತ್ ಅಲಿ ಹೇಳಿದ್ದಾರೆ.
Mangalore North MLA congress candidate Inayat Ali in full swing campaign, No loss if former north MLA Moideen Bava quits party says Inayat Ali speaking to Media persons.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm