ಬ್ರೇಕಿಂಗ್ ನ್ಯೂಸ್
28-04-23 03:48 pm Mangalore Correspondent ಕರಾವಳಿ
ಪುತ್ತೂರು, ಎ.28 : ಸಂಘಟನೆಗಿಂತ ತಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದೆ. ಇದೇ ನೆಪದಲ್ಲಿ ಸಂಘಟನೆ ಬಿಟ್ಟು ಹೋದವರಿದ್ದಾರೆ. ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಒಬ್ಬರು ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರ ಮಾಡಿಕೊಂಡು ಬರುತ್ತಿದೆ. ದೇಶದ ಪ್ರಧಾನಿ ಆಗಿರುವ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಘದ ಕೊಡುಗೆ. ಅವರ್ಯಾರೂ ತಾವು ಪ್ರಧಾನಿ ಆಗುತ್ತೇವೆ, ರಾಷ್ಟ್ರಪತಿ ಆಗುತ್ತೇವೆಂದು ಅಂದ್ಕೊಂಡವರಲ್ಲ. ಇದರ ನಡುವೆ, ಸಂಘದ ಚೌಕಟ್ಟನ್ನು ಮೀರಿ ಹೊರ ನಡೆದ ಹಲವಾರು ಮಂದಿ ನಾಯಕರು ದೇಶದಲ್ಲಿದ್ದಾರೆ.
ಕಲ್ಯಾಣ್ ಸಿಂಗ್ , ಪ್ರವೀಣ್ ತೊಗಾಡಿಯಾ ದೊಡ್ಡ ಮಟ್ಟದ ನಾಯಕರಾಗಿದ್ದರು. ಆದರೆ ತಾವು ನಡೆದಿದ್ದೇ ಸರಿಯೆಂದು ಸಂಘದ ಚೌಕಟ್ಟನ್ನು ಬಿಟ್ಟು ಹೊರ ನಡೆದರು. ಇದೆಲ್ಲ ನಡೆದಿದ್ದರೂ, ಸಂಘ ತನ್ನ ಚೌಕಟ್ಟಿಗೆ ಬದ್ಧವಾಗಿಯೇ ನಿಂತಿದೆ ಎಂದರು. ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರವಾಗಿ ನಿಂತಿರುವ ಅರುಣ್ ಕುಮಾರ್ ಪುತ್ತಿಲ ತಾನು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದೇನೆ ಅಂತಾರೆ. ಆದರೆ ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಮಾಡಿರುವುದೇ ನರೇಂದ್ರ ಮೋದಿ ನೇತೃತ್ವದ ತಂಡ ಅನ್ನೋದು ಅವರಿಗೆ ತಿಳಿದಿಲ್ಲವೇ.. ಸಂಘದ ಚೌಕಟ್ಟು ಹೊರಗೆ ನಿಂತು ಮೋದಿಗೆ ಬೆಂಬಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.
ಸದ್ಯದ ಮಟ್ಟಿಗೆ ದೇಶದಲ್ಲಿ ಹಿಂದೂಗಳ ಪರವಾಗಿರುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಅದಕ್ಕಾಗಿ ಬಿಜೆಪಿಗೇ ಮತ ಕೊಡಬೇಕು ಎನ್ನುವುದು ನಮ್ಮ ನಿಲುವು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ತಡೆ ಕಾಯ್ದೆ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಈ ಕಾರಣಕ್ಕಾಗಿ ಹಿಂದುಗಳೆಲ್ಲಾ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮುರಳಿಕೃಷ್ಣ ಮನವಿ ಮಾಡಿದರು.
Bajarang dal leader Puttur Muralikrishan slams those calling themsleves as big Hindu Leaders. Congress should never come to power he added.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm