ಬ್ರೇಕಿಂಗ್ ನ್ಯೂಸ್
28-04-23 03:48 pm Mangalore Correspondent ಕರಾವಳಿ
ಪುತ್ತೂರು, ಎ.28 : ಸಂಘಟನೆಗಿಂತ ತಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದೆ. ಇದೇ ನೆಪದಲ್ಲಿ ಸಂಘಟನೆ ಬಿಟ್ಟು ಹೋದವರಿದ್ದಾರೆ. ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಒಬ್ಬರು ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರ ಮಾಡಿಕೊಂಡು ಬರುತ್ತಿದೆ. ದೇಶದ ಪ್ರಧಾನಿ ಆಗಿರುವ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಘದ ಕೊಡುಗೆ. ಅವರ್ಯಾರೂ ತಾವು ಪ್ರಧಾನಿ ಆಗುತ್ತೇವೆ, ರಾಷ್ಟ್ರಪತಿ ಆಗುತ್ತೇವೆಂದು ಅಂದ್ಕೊಂಡವರಲ್ಲ. ಇದರ ನಡುವೆ, ಸಂಘದ ಚೌಕಟ್ಟನ್ನು ಮೀರಿ ಹೊರ ನಡೆದ ಹಲವಾರು ಮಂದಿ ನಾಯಕರು ದೇಶದಲ್ಲಿದ್ದಾರೆ.
ಕಲ್ಯಾಣ್ ಸಿಂಗ್ , ಪ್ರವೀಣ್ ತೊಗಾಡಿಯಾ ದೊಡ್ಡ ಮಟ್ಟದ ನಾಯಕರಾಗಿದ್ದರು. ಆದರೆ ತಾವು ನಡೆದಿದ್ದೇ ಸರಿಯೆಂದು ಸಂಘದ ಚೌಕಟ್ಟನ್ನು ಬಿಟ್ಟು ಹೊರ ನಡೆದರು. ಇದೆಲ್ಲ ನಡೆದಿದ್ದರೂ, ಸಂಘ ತನ್ನ ಚೌಕಟ್ಟಿಗೆ ಬದ್ಧವಾಗಿಯೇ ನಿಂತಿದೆ ಎಂದರು. ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರವಾಗಿ ನಿಂತಿರುವ ಅರುಣ್ ಕುಮಾರ್ ಪುತ್ತಿಲ ತಾನು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದೇನೆ ಅಂತಾರೆ. ಆದರೆ ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಮಾಡಿರುವುದೇ ನರೇಂದ್ರ ಮೋದಿ ನೇತೃತ್ವದ ತಂಡ ಅನ್ನೋದು ಅವರಿಗೆ ತಿಳಿದಿಲ್ಲವೇ.. ಸಂಘದ ಚೌಕಟ್ಟು ಹೊರಗೆ ನಿಂತು ಮೋದಿಗೆ ಬೆಂಬಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.
ಸದ್ಯದ ಮಟ್ಟಿಗೆ ದೇಶದಲ್ಲಿ ಹಿಂದೂಗಳ ಪರವಾಗಿರುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಅದಕ್ಕಾಗಿ ಬಿಜೆಪಿಗೇ ಮತ ಕೊಡಬೇಕು ಎನ್ನುವುದು ನಮ್ಮ ನಿಲುವು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ತಡೆ ಕಾಯ್ದೆ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಈ ಕಾರಣಕ್ಕಾಗಿ ಹಿಂದುಗಳೆಲ್ಲಾ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮುರಳಿಕೃಷ್ಣ ಮನವಿ ಮಾಡಿದರು.
Bajarang dal leader Puttur Muralikrishan slams those calling themsleves as big Hindu Leaders. Congress should never come to power he added.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm