ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm