ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm