ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm