ಬ್ರೇಕಿಂಗ್ ನ್ಯೂಸ್
30-04-23 04:44 pm Mangalore Correspondent ಕರಾವಳಿ
ಮಂಗಳೂರು, ಎ.30: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸಿನಿಂದ ಬಂಡಾಯ ಎದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಯ್ದೀನ್ ಬಾವ ಪರವಾಗಿ ಪ್ರಚಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗಮಿಸುತ್ತಿದ್ದಾರೆ.
ಮೇ 1ರಂದು ಮಧ್ಯಾಹ್ನ ಎರಡು ಗಂಟೆಗೆ ಕೃಷ್ಣಾಪುರದ ಫಿಝಾ ಗಾರ್ಡನ್ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸುವ ದೇವೇಗೌಡರು, ಸೂರಜ್ ಹೊಟೇಲ್ ನಲ್ಲಿ ಮೊಯ್ದೀನ್ ಬಾವ ಜೊತೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಪರಾಹ್ನ 3.30ಕ್ಕೆ ಬಜ್ಪೆಯ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಸುಪಾಸಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ನಾಲ್ಕು ಗಂಟೆಗೆ ಗುರುಪುರ ಪೆರಾರಿ ಬಲವಾಂಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಐದು ಗಂಟೆಗೆ ಕೈಕಂಬದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ದೇವೇಗೌಡರು ಭಾಗವಹಿಸಲಿದ್ದಾರೆ. ರಾತ್ರಿ ಏಳು ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಈಗಾಗಲೇ ಮೊಯ್ದೀನ್ ಬಾವ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಎಲ್ಲ ಕಡೆ ಜೆಡಿಎಸ್ ಪರವಾಗಿ ಕಾರ್ಯಕರ್ತರು ಇಲ್ಲದೇ ಇರುವುದು ಪ್ರಚಾರಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ದೇವೇಗೌಡರನ್ನು ಕರೆಸಿ ಒಂದಷ್ಟು ಹುರುಪು ಹೆಚ್ಚಿಸಲು ಮೊಯ್ದೀನ್ ಬಾವ ತೊಡಗಿದ್ದಾರೆ.
Former Prime Minister H D Deve Gowda will visit the Mangaluru North constituency to campaign for Janata Dal (S) candidate Mohiudeen Bhava, according to MLC and JD(S) leader B M Farooq.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am