ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.
ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm