ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.



ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm