ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.



ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am