ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.



ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am