ಬ್ರೇಕಿಂಗ್ ನ್ಯೂಸ್
01-05-23 10:03 pm Mangalore Correspondent ಕರಾವಳಿ
ಮಂಗಳೂರು, ಮೇ 1 : ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮೂಲ್ಕಿ ಬಳಿಯ ಕೊಳ್ನಾಡಿನಲ್ಲಿ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಎಲ್ಲ ಸಿದ್ಧತೆ ನಡೆದಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು.
ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ನಾಯಕನ ಸ್ವಾಗತಕ್ಕೆ ಕರಾವಳಿಯ ಜನತೆ ತವಕದಿಂದ ಕಾಯುತ್ತಿದ್ದಾರೆ. ಪ್ರಧಾನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿ ಬೂತ್ ಮಟ್ಟದಲ್ಲಿ ತಯಾರಿ ನಡೆದಿದ್ದು ಪ್ರತಿ ಬೂತ್ಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಹೇಳಿದರು. ಈ ಬಾರಿ ಮೋದಿ ಸಮಾವೇಶವನ್ನು ಗ್ರಾಮಾಂತರ ಪ್ರದೇಶದಲ್ಲಿ ನಡೆಸುತ್ತಿದ್ದು, ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ. ಎರಡೂ ಜಿಲ್ಲೆಗಳ ಮಧ್ಯಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿರುವುದರಿಂದ ದ.ಕ ಮತ್ತು ಉಡುಪಿ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಲು ಅನುಕೂಲವಾಗುತ್ತದೆ. ಈಗಾಗಲೇ ವೇದಿಕೆ ಮತ್ತು ಪೆಂಡಾಲ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ವಾಹನಗಳ ಪಾರ್ಕಿಂಗ್ಗೆ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಮಂಗಳವಾರ ಮಧ್ಯಾಹ್ನದೊಳಗೆ ಎಲ್ಲ ಕೆಲಸ ಪೂರ್ಣಗೊಂಡು ಇಡೀ ಪ್ರದೇಶವನ್ನು ಭದ್ರತಾ ಸಿಬ್ಬಂದಿಗಳಿಗೆ ಬಿಟ್ಟುಕೊಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಸುದರ್ಶನ್ ಮಾಹಿತಿ ನೀಡಿದರು.
ಬೆಳಗ್ಗೆ 9 ಗಂಟೆಯೊಳಗೆ ಸಭೆಗೆ ಬನ್ನಿ
ಪ್ರಧಾನಿ ಮೋದಿ ಸಾರ್ವಜನಿಕ ಸಭೆ ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದ್ದು, ಆಗಮಿಸುವ ಕಾರ್ಯಕರ್ತರು, ಸಾರ್ವಜನಿಕರು ಬೆಳಗ್ಗೆ 9 ಗಂಟೆಯೊಳಗೆ ಸಮಾವೇಶದ ಸ್ಥಳಕ್ಕೆ ಆಗಮಿಸಬೇಕು. ಭದ್ರತಾ ಕಾರಣಗಳಿಗೆ ಪ್ರಧಾನಿ ಆಗಮಿಸುವ ಹೊತ್ತಿಗೆ ಸಮಾವೇಶದ ಪರಿಸರದಲ್ಲಿ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗುತ್ತದೆ. ಹೀಗಾಗಿ ಪ್ರಧಾನಿ ಸ್ಥಳಕ್ಕೆ ಆಗಮಿಸುವ ಮೊದಲೇ ಸಾರ್ವಜನಿಕರು ಸಮಾವೇಶದ ಮೈದಾನದಲ್ಲಿರಬೇಕು ಎಂದು ಸುದರ್ಶನ್ ಮನವಿ ಮಾಡಿದರು.
ಪ್ರಧಾನಿಗೆ ಕುಡ್ಲದ ವಿಶೇಷ ಆತಿಥ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಕರಾವಳಿಯ ತಿಂಡಿ ತಿನಿಸುಗಳನ್ನು ವಿಶೇಷವಾಗಿ ಇಷ್ಟಪಡುತ್ತಿದ್ದು, ಅವರಿಗಾಗಿ ಉಪ್ಪಿಟ್ಟು ಅವಲಕ್ಕಿ, ಮೂಡೆ, ನೀರ್ದೋಸೆ ಮುಂತಾದ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತಿದೆ.
ಮೂರು ಕಡೆ ಹೆಲಿಪ್ಯಾಡ್
ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಜಪೆಯಿಂದ ಹೆಲಿಕಾಪ್ಟರ್ ಮೂಲಕ ಸಮಾವೇಶದ ಸ್ಥಳಕ್ಕೆ ಆಗಮಿಸುತ್ತಾರೆ. ಹೆಲಿಕಾಪ್ಟರ್ ಇಳಿಯಲು ಪಣಂಬೂರಿನ ಎನ್ಎಂಪಿಎ, ಸುರತ್ಕಲ್ನ ಎನ್ಐಟಿಕೆ ಹಾಗೂ ಮೂಲ್ಕಿಯ ಸಮಾವೇಶದ ಸ್ಥಳದ ಪಕ್ಕದಲ್ಲಿ ಹೆಲಿಪ್ಯಾಡ್ಗಳನ್ನು ನಿರ್ಮಿಸಲಾಗಿದೆ.
ಎರಡು ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ
ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಎರಡೂ ಜಿಲ್ಲೆಗಳ ಒಟ್ಟು 13 ಕ್ಷೇತ್ರಗಳ ಅಭ್ಯರ್ಥಿಗಳೂ ಹಾಜರಿರುತ್ತಾರೆ. ಪ್ರಧಾನಿ ಮೋದಿ ಅವರು ಮೂಲ್ಕಿಯ ಸಮಾವೇಶದ ಬಳಿಕ ಅಂಕೋಲಕ್ಕೆ ತೆರಳಲಿದ್ದಾರೆ. ಬಳಿಕ ಬೆಳಗಾವಿಯ ಕಿತ್ತೂರಿನಲ್ಲಿ ಸಾರ್ವಜನಿಕ ಸಮಾವೇಶ ನಡೆಲಿಸದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಪಕ್ಷದ ಮುಖಂಡರಾದ ಸಂಜಯ್ ಪ್ರಭು ಉಪಸ್ಥಿತರಿದ್ದರು.
PM Modi in Mulki Mangalore on May 3rd for election campaign, arrangement in full swing. According to Uday Kumar Shetty, in charge of Mangaluru section, "PM Modi will arrive at Mulky on May 3 and address a huge public meeting. More than three lakh people will participate in the meeting." Uday spoke at a press conference at the Udupi district media house.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm