ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm