ಬ್ರೇಕಿಂಗ್ ನ್ಯೂಸ್
02-05-23 10:35 pm Mangalore Correspondent ಕರಾವಳಿ
ಪುತ್ತೂರು, ಮೇ 2 : ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತು ಸ್ವಯಂಘೋಷಿತ ಹಿಂದು ಮುಖಂಡ ಪಕ್ಷೇತರ ಅಭ್ಯರ್ಥಿ ಗೂಂಡಾರಾಜ್ಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಿಂದೆ ನನ್ನ ಮಿತ್ರರಾಗಿದ್ದರು. ಈಗ ನನ್ನ ಮಿತ್ರರಲ್ಲ. ಶತ್ರು ಆಗಿದ್ದಾರೆ. ಪಕ್ಷೇತರ ಅಭ್ಯರ್ಥಿ ತಾನೊಬ್ಬನೇ ಹಿಂದು ರಕ್ಷಕನೆಂದು ಹೇಳಿಕೊಂಡು ಖಲೀಸ್ತಾನ್ ಕಮಾಂಡೋ ರೀತಿ ಪೋಸು ಕೊಡುತ್ತಿದ್ದಾರೆ. ಪುತ್ತೂರಿನಲ್ಲಿ ಈ ಹಿಂದೆ ಇದ್ದ ಗೂಂಡಾ ರಾಜ್ಯ ಮರು ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮೂದಲಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಹರಿಹಾಯ್ದರು. ಪಕ್ಷದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಹೋಗೋದು, ಹಿಂದೂ ಮುಖಂಡನೆಂದು ಹೇಳಿಕೊಂಡು ಪಕ್ಷೇತರ ನಿಲ್ಲುವುದು ಆದರ್ಶವಲ್ಲ. ನನಗೆ ಸೀಟ್ ಸಿಕ್ಕಿಲ್ಲ ಅಂತ ಇನ್ನೊಂದು ಪಾರ್ಟಿಯಲ್ಲಿ ನಿಲ್ಲೋದು ಆದರ್ಶ ಅಲ್ಲ. ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ಷಡ್ಯಂತ್ರಕ್ಕೆ ಬಿಜೆಪಿ ಯಾವತ್ತೂ ಬಲಿಯಾಗಲ್ಲ ಎಂದರು.
ಎತ್ತಿನಹೊಳೆ ಯೋಜನೆ ಕಾರಣಕ್ಕೆ ನೇತ್ರಾವತಿ ಬರಡಾಗಿದೆ, ಅದಕ್ಕೆ ಡೀವಿ ಸದಾನಂದ ಗೌಡರೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎತ್ತಿನಹೊಳೆ ಯೋಜನೆ ಮೂಲಕ 1300 ಟಿಎಂಸಿ ಸಮುದ್ರಕ್ಕೆ ಹೋಗುವ ನೀರನ್ನು ಮಳೆಗಾಲದಲ್ಲಿ ಕೋಲಾರಕ್ಕೆ ಒಯ್ಯಲು ತೀರ್ಮಾನಿಸಿದೆ. ನಾನು ಸಿಎಂ ಆಗಿದ್ದಾಗ 23 ಟಿಎಂಸಿ ನೀರನ್ನು ನೀರಿಲ್ಲದ ಜಾಗಕ್ಕೆ ಕಳಿಸುವ ಯೋಜನೆ ಕೈಗೆತ್ತಿಕೊಂಡಿದ್ದೇನೆ. ನೀರಿಲ್ಲದವರಿಗೆ ನೀರು ಕೋಡೋದು ತಪ್ಪಾ ಎಂದು ಪ್ರಶ್ನಿಸಿದರು. ಕಳೆದ ಹತ್ತು ದಿನಗಳಿಂದ ಪಯಸ್ವಿನಿ, ಕುಮಾರಧಾರಾ, ನೇತ್ರಾವತಿ ನದಿಗಳು ನೀರಿಲ್ಲದೆ ಬತ್ತಿವೆ. ಅದಕ್ಕೆ ಸದಾನಂದ ಗೌಡ ಕಾರಣವಾ ಎಂದು ಕೇಳಿದರು.
Former Minister Sadananda Gowda calls Puttur Arun Puthila as Khalistan commander, calls Ashok Rai Puttur goonda sparks controversy. He is posing himself as Khalistan commander being a hindu leader.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm