ಬ್ರೇಕಿಂಗ್ ನ್ಯೂಸ್
02-05-23 10:35 pm Mangalore Correspondent ಕರಾವಳಿ
ಪುತ್ತೂರು, ಮೇ 2 : ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತು ಸ್ವಯಂಘೋಷಿತ ಹಿಂದು ಮುಖಂಡ ಪಕ್ಷೇತರ ಅಭ್ಯರ್ಥಿ ಗೂಂಡಾರಾಜ್ಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಿಂದೆ ನನ್ನ ಮಿತ್ರರಾಗಿದ್ದರು. ಈಗ ನನ್ನ ಮಿತ್ರರಲ್ಲ. ಶತ್ರು ಆಗಿದ್ದಾರೆ. ಪಕ್ಷೇತರ ಅಭ್ಯರ್ಥಿ ತಾನೊಬ್ಬನೇ ಹಿಂದು ರಕ್ಷಕನೆಂದು ಹೇಳಿಕೊಂಡು ಖಲೀಸ್ತಾನ್ ಕಮಾಂಡೋ ರೀತಿ ಪೋಸು ಕೊಡುತ್ತಿದ್ದಾರೆ. ಪುತ್ತೂರಿನಲ್ಲಿ ಈ ಹಿಂದೆ ಇದ್ದ ಗೂಂಡಾ ರಾಜ್ಯ ಮರು ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮೂದಲಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಹರಿಹಾಯ್ದರು. ಪಕ್ಷದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಹೋಗೋದು, ಹಿಂದೂ ಮುಖಂಡನೆಂದು ಹೇಳಿಕೊಂಡು ಪಕ್ಷೇತರ ನಿಲ್ಲುವುದು ಆದರ್ಶವಲ್ಲ. ನನಗೆ ಸೀಟ್ ಸಿಕ್ಕಿಲ್ಲ ಅಂತ ಇನ್ನೊಂದು ಪಾರ್ಟಿಯಲ್ಲಿ ನಿಲ್ಲೋದು ಆದರ್ಶ ಅಲ್ಲ. ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ಷಡ್ಯಂತ್ರಕ್ಕೆ ಬಿಜೆಪಿ ಯಾವತ್ತೂ ಬಲಿಯಾಗಲ್ಲ ಎಂದರು.
ಎತ್ತಿನಹೊಳೆ ಯೋಜನೆ ಕಾರಣಕ್ಕೆ ನೇತ್ರಾವತಿ ಬರಡಾಗಿದೆ, ಅದಕ್ಕೆ ಡೀವಿ ಸದಾನಂದ ಗೌಡರೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎತ್ತಿನಹೊಳೆ ಯೋಜನೆ ಮೂಲಕ 1300 ಟಿಎಂಸಿ ಸಮುದ್ರಕ್ಕೆ ಹೋಗುವ ನೀರನ್ನು ಮಳೆಗಾಲದಲ್ಲಿ ಕೋಲಾರಕ್ಕೆ ಒಯ್ಯಲು ತೀರ್ಮಾನಿಸಿದೆ. ನಾನು ಸಿಎಂ ಆಗಿದ್ದಾಗ 23 ಟಿಎಂಸಿ ನೀರನ್ನು ನೀರಿಲ್ಲದ ಜಾಗಕ್ಕೆ ಕಳಿಸುವ ಯೋಜನೆ ಕೈಗೆತ್ತಿಕೊಂಡಿದ್ದೇನೆ. ನೀರಿಲ್ಲದವರಿಗೆ ನೀರು ಕೋಡೋದು ತಪ್ಪಾ ಎಂದು ಪ್ರಶ್ನಿಸಿದರು. ಕಳೆದ ಹತ್ತು ದಿನಗಳಿಂದ ಪಯಸ್ವಿನಿ, ಕುಮಾರಧಾರಾ, ನೇತ್ರಾವತಿ ನದಿಗಳು ನೀರಿಲ್ಲದೆ ಬತ್ತಿವೆ. ಅದಕ್ಕೆ ಸದಾನಂದ ಗೌಡ ಕಾರಣವಾ ಎಂದು ಕೇಳಿದರು.
Former Minister Sadananda Gowda calls Puttur Arun Puthila as Khalistan commander, calls Ashok Rai Puttur goonda sparks controversy. He is posing himself as Khalistan commander being a hindu leader.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm