ಬ್ರೇಕಿಂಗ್ ನ್ಯೂಸ್
02-05-23 11:03 pm Mangalore Correspondent ಕರಾವಳಿ
ಮಂಗಳೂರು, ಮೇ 2: ಪ್ರಧಾನಿ ಮೋದಿ ಮೂಲ್ಕಿಯಲ್ಲಿ ಪ್ರಚಾರ ಸಭೆ ನಡೆಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಳೆಯಂಗಡಿಯಿಂದ ಮೂಲ್ಕಿ ವರೆಗೆ ವಾಹನ ಸಂಚಾರ ನಿಷೇಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
ಉಡುಪಿ ಕಡೆಯಿಂದ ಬರುವ ಎಲ್ಲ ರೀತಿಯ ವಾಹನಗಳು ಮೂಲ್ಕಿ ವಿಜಯಾ ಸನ್ನಿಧಿ ಬಳಿಯಿಂದ ಎಡಕ್ಕೆ ಚಲಿಸಿ ಕಿನ್ನಿಗೋಳಿ, ಕಟೀಲು, ಬಜಪೆ, ಕಾವೂರು ಮೂಲಕ ಮಂಗಳೂರಿಗೆ ಸಂಚರಿಸುವುದು. ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುವ ವಾಹನಗಳು ಕೆಪಿಟಿ ಜಂಕ್ಷನ್ ಮೂಲಕ ಬಲಕ್ಕೆ ತಿರುಗಿ ಬೊಂದೇಲ್, ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ ಮೂಲಕ ಮೂಲ್ಕಿಯತ್ತ ಚಲಿಸುವುದು. ಸುರತ್ಕಲ್ ಕಡೆಯಿಂದ ಉಡುಪಿಯತ್ತ ಚಲಿಸುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ, ಎಸ್ ಕೋಡಿ ಮೂಲಕ ಮೂಲ್ಕಿ ಕಡೆಗೆ ತೆರಳುವುದು.


ಹಳೆಯಂಗಡಿ ಜಂಕ್ಷನ್ನಿಂದ ಮೂಲ್ಕಿ ವಿಜಯಾ ಸನ್ನಿಧಿ ವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಕ್ಕೆಲಗಳ ಬದಿಯಲ್ಲಿ ವಾಹನ ಸಂಚಾರ ಮತ್ತು ಪಾರ್ಕ್ ಮಾಡುವುದನ್ನು ನಿಷೇಧ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳು ಮೂಲ್ಕಿಯ ಜಾಗತಿಕ ಬಂಟರ ಸಂಘದ ಕಚೇರಿ ಬಳಿ, ಪಡುವೈಲು ಪಾರ್ಕಿಂಗ್, ಹೆದ್ದಾರಿ ಬದಿಯಲ್ಲಿ ಮಾಡಿರುವ ಪಾರ್ಕಿಂಗ್ ಪ್ರದೇಶಗಳಲ್ಲಿ ಮಾತ್ರ ವಾಹನ ನಿಲುಗಡೆ ಮಾಡಬೇಕು. ವಿಐಪಿ ವಾಹನಗಳಿಗೆ ಗುಂಡಾಲು ಗುತ್ತು ನಿಲುಗಡೆ ಸ್ಥಳದಲ್ಲಿ ಪಾರ್ಕಿಂಗ್ ಪ್ರದೇಶ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಮೋದಿ ಕಾರ್ಯಕ್ರಮ ನಡೆಯಲಿದ್ದು, 10.30ರಿಂದ ಆಸುಪಾಸಿನಲ್ಲಿ ಪೂರ್ತಿಯಾಗಿ ಸಾರ್ವಜನಿಕ ವಾಹನ, ಜನರ ಓಡಾಟಕ್ಕೆ ನಿಷೇಧ ಹಾಕಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲ್ಕಿ ಬಳಿಯ ಕೊಳ್ನಾಡಿನಲ್ಲಿ ಹೆದ್ದಾರಿ ಬದಿಯಲ್ಲೇ ಬೃಹತ್ ವೇದಿಕೆ ರೆಡಿ ಮಾಡಲಾಗಿದ್ದು, ಸುಮಾರು 70 ಸಾವಿರ ಜನರು ನಿಲ್ಲುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಉಡುಪಿ ಮತ್ತು ಮಂಗಳೂರಿನ ಜನರು ಒಂದೇ ಕಡೆ ಬಂದು ಸೇರಲಿದ್ದಾರೆ.
Prime Minister Narendra Modi will hold a public meeting in regard to the assembly elections campaign at Karnad, Mulki on May 3. The public from Dakshina Kannada, Udupi and other surrounding districts will take part in the public meeting. In view of the security of the Prime Minister, alternative arrangements have been made for vehicular movement. On May 3, barricades will be installed at random spots from 7 am to 2 pm, and alternate routes will be created for vehicular traffic.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm