ಬ್ರೇಕಿಂಗ್ ನ್ಯೂಸ್
04-05-23 10:52 pm HK News Desk ಕರಾವಳಿ
ಪುತ್ತೂರು, ಮೇ 4: ಪುತ್ತೂರಿನಲ್ಲಿ ದಿನದಿಂದ ದಿನಕ್ಕೆ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಪರ ಜನ ಬೆಂಬಲ ಹೆಚ್ಚುತ್ತಿದೆ. ಬುಧವಾರ ಸಂಜೆ ವಿಟ್ಲದಲ್ಲಿ ನಡೆಸಿದ ರೋಡ್ ಶೋದಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಸೇರಿದ್ದು, ಇತಿಹಾಸದಲ್ಲಿ ದಾಖಲಾಯಿತು. ವಿಟ್ಲ ಪೇಟೆಯಲ್ಲಿ ಎರಡು ಕಿಮೀ ಉದ್ದಕ್ಕೆ ನಡೆದ ರೋಡ್ ಶೋದಲ್ಲಿ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು, ಕೇಸರಿ ಕಲರವ ಮೂಡಿಸಿತ್ತು.
ವಿಟ್ಲ ಮುಖ್ಯ ಪೇಟೆಯಲ್ಲಿ ಕಾರ್ಯಕರ್ತರ ಮತ್ತು ಅರುಣ್ ಪುತ್ತಿಲರ ರೋಡ್ ಶೋ ಮುಗಿದು ಅರಮನೆ ಗದ್ದೆಯಲ್ಲಿ ಸಂಜೆ ಹೊತ್ತಿಗೆ ಸಮಾವೇಶ ನಡೆಯಿತು. ರೋಡ್ ಶೋದಲ್ಲಿ ಬೇರಾವುದೇ ಭಾಷಣಕಾರರು ಇರಲಿಲ್ಲ. ಸ್ಟಾರ್ ಕ್ಯಾಂಪೇನರ್ ಕೂಡ ಇರಲಿಲ್ಲ. ಅರುಣ್ ಪುತ್ತಿಲರೇ ಎಲ್ಲರಿಗೂ ಸ್ಟಾರ್ ಆಗಿದ್ದರು.


ಸಮಾವೇಶ ಉದ್ದೇಶಿಸಿ ಮಾತನಾಡಿದ ಅರುಣ್ ಪುತ್ತಿಲ, ಅಧಿಕಾರಕ್ಕಾಗಿ ಆಸೆ ಪಟ್ಟವನಲ್ಲ. ಕಾಂಗ್ರೆಸ್ ಹಾಗೂ ಎಸ್ಡಿಪಿಐ ವಿರುದ್ಧ ಹೋರಾಟದ ಭಾಗವಾಗಿ ಕಣಕ್ಕಿಳಿಯಬೇಕೆಂಬ ಕಾರ್ಯಕರ್ತರ ಆಶಯದಂತೆ ಸ್ಪರ್ಧಿಸುತ್ತಿದ್ದೇನೆ. ಇದರ ಹೊರತಾಗಿ ಯಾವುದೇ ಪಕ್ಷದ ವಿರುದ್ಧ ಹೋರಾಟ ಇದಲ್ಲ ಎಂದು ಹೇಳಿದರು. ಸೌಮ್ಯಾ ಭಟ್, ಅಕ್ಷತಾ ಕೊಲೆ ಪ್ರಕರಣ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ನಮ್ಮ ಕಣ್ಣ ಮುಂದೆ ಹಾದು ಬರುತ್ತದೆ. ಹಿಂದುತ್ವದ ಹೆಸರಿನಲ್ಲಿ ಸ್ಪರ್ಧಿಸುತ್ತಿದ್ದೇನೆ. ಆರೆಸ್ಸೆಸ್ ಹಿರಿಯರು, ಮಠಾಧೀಶರು, ಸಂಘ ಪರಿವಾರದ ಕಾರ್ಯಕರ್ತರ ಆಶಯದಂತೆ ಸ್ಪರ್ಧಿಸುತ್ತಿದ್ದೇನೆ. ನೀವೆಲ್ಲ ನನ್ನ ಜೊತೆಗಿದ್ದೀರೆಂದು ನಂಬಿಕೊಂಡಿದ್ದೇನೆ ಎಂದು
ಭಾವುಕರಾದರು.
ಸಮಾವೇಶದಲ್ಲಿ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಧರ್ಮ- ಅಧರ್ಮದ ನಡುವಿನ ಹೋರಾಟ ಇದೆಂದು ಭಾಸವಾಗುತ್ತಿದೆ. ಪಕ್ಷದ ಪ್ರಮುಖರು ಅವರ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದು ಬಿಟ್ಟು ಅರುಣ್ ಪುತ್ತಿಲರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಬೇಸರದ ಸಂಗತಿ. ಅರುಣ ಪುತ್ತಿಲರಿಗೆ ದೊರಕಿದ ಅಪಾರ ಪ್ರಮಾಣದ ಜನಬೆಂಬಲ ನೋಡಿದಾಗ ಅಚ್ಚರಿಯಾಗುತ್ತದೆ. ಇದೇ ರೀತಿಯ ಜನಬೆಂಬಲ ನಾಡಿದ್ದು ಮತದಾನ ದಿನಕ್ಕೆ ಮತಗಳಾಗಿ ಪರಿವರ್ತನೆ ಆಗಬೇಕು ಎಂದು ಹೇಳಿದರು.
Arun Puthila star campaign in Vitla, thousands join hands in Road show. Arun Puthila himself campaigned as star campaigner.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm