ಬ್ರೇಕಿಂಗ್ ನ್ಯೂಸ್
06-05-23 02:57 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಮಂಗಳೂರು ಮಹಾನಗರಕ್ಕೆ ನೀರೊದಗಿಸುವ ನೇತ್ರಾವತಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. 2019ರಲ್ಲಿ ಇದೇ ರೀತಿಯ ಸ್ಥಿತಿ ಎದುರಾಗಿತ್ತು. ಮೂರು ವರ್ಷಗಳ ಬಳಿಕ ಮಂಗಳೂರಿನಲ್ಲಿ ಮತ್ತೆ ಅದೇ ರೀತಿಯ ಸ್ಥಿತಿ ಉಂಟಾಗಿದೆ.
2019ರಲ್ಲಿ ಎಪ್ರಿಲ್ 11ರಿಂದ ಮೊದಲನೇ ಹಂತದ ನೀರಿನ ರೇಷನಿಂಗ್ ಆರಂಭಗೊಂಡಿತ್ತು. ಆದರೆ, ಆಗ ತುಂಬೆ ಡ್ಯಾಮ್ ನಲ್ಲಿ 5.5 ಮೀ.ನಷ್ಟು ನೀರಿನ ಮಟ್ಟ ಇತ್ತು. ನಂತರದ ವರ್ಷಗಳಲ್ಲಿ ಬೇಸಗೆಯಲ್ಲಿ ಮಳೆ ಸುರಿದ ಪರಿಣಾಮ ನಗರದಲ್ಲಿ ನೀರಿನ ಸಮಸ್ಯೆ ಬಂದಿರಲಿಲ್ಲ. ಆದರೆ, ಈ ಬಾರಿ ಬೇಸಗೆಯಲ್ಲಿ ಮಳೆಯೇ ಸುರಿದಿಲ್ಲ. ಇದರಿಂದಾಗಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ ತೀವ್ರ ಕುಸಿದಿದೆ. ಮೇ 5ರಂದು ನೀರಿನ ಪ್ರಮಾಣ 4.10 ಮೀ.ಗೆ ಇಳಿಕೆ ಕಂಡಿದೆ. ತುಂಬೆ ಕೆಳ ಭಾಗದಲ್ಲಿ ಹೊಸತಾಗಿ ಅಡ್ಯಾರ್ ನಲ್ಲಿ ಮಾಡಿರುವ ಅಣೆಕಟ್ಟಿನಿಂದ ನೀರೆತ್ತುವ ಕೆಲಸ ಆಗುತ್ತಿದೆ. ಆದರೂ ಎರಡು ವಾರಗಳಿಗೆ ಬೇಕಾಗುವಷ್ಟು ಮಾತ್ರ ನೀರಿದೆ.

2016ರಲ್ಲಿಯೂ ಮಂಗಳೂರಿನಲ್ಲಿ ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಉಂಟಾಗಿತ್ತು. ತುಂಬೆ ಡ್ಯಾಂನಲ್ಲಿ ನೀರಿಲ್ಲದೆ, ನಗರದಲ್ಲಿ ಟ್ಯಾಂಕರ್ ನೀರು ಪೂರೈಸಲಾಗಿತ್ತು. ಕೊನೆಗೆ ಕುದುರೆಮುಖದ ಲಕ್ಯಾ ಡ್ಯಾಂ ನೀರನ್ನು ತರಿಸಲಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ 2017ರಲ್ಲಿ ಪ್ರತಿ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್ ಆರಂಭಿಸಿತ್ತು. ಇದೀಗ ದಿನ ಬಿಟ್ಟು ದಿನಕ್ಕೆ ನೀರು ಪೂರೈಸುತ್ತಿದ್ದು ಇದರಿಂದ ಎತ್ತರದ ಪ್ರದೇಶಗಳಿಗೆ ನೀರು ತಲುಪುವುದಿಲ್ಲ. ಪೈಪ್ ನಲ್ಲಿ ಗಾಳಿ ತುಂಬುವುದರಿಂದ ಕೆಲವು ಪ್ರದೇಶಕ್ಕೆ ನೀರು ಸರಬರಾಜು ಆಗುತ್ತಲ್ಲ ಎಂಬ ದೂರು ಕೇಳಿಬಂದಿದೆ.
ಈ ನಡುವೆ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಕಾಲೇಜು ತರಗತಿಗಳಿಗೂ ತಟ್ಟಿದೆ. ಎರಡೂ ಜಿಲ್ಲೆಗಳಲ್ಲಿ ಬಹುತೇಕ ಕಾಲೇಜುಗಳಿಗೆ ನೀರು ಸರಬರಾಜು ಸಮಸ್ಯೆ ಕಾಡುತ್ತಿದೆ. ಹಾಸ್ಟೆಲ್ ಹೊಂದಿರುವ ಕಾಲೇಜುಗಳಲ್ಲಿ ನೀರಿನ ಕೊರತೆ ಬಹುತೇಕ ಎದುರಾಗಿದೆ.
ಇದೇ ವೇಳೆ, ಕುಡಿಯುವ ನೀರಿನ ಸಮಸ್ಯೆಯಿರುವ ಕಾಲೇಜುಗಳಲ್ಲಿ ಆನ್ಲೈನ್ ತರಗತಿ ನಡೆಸಲು ಅವಕಾಶ ನೀಡಲಾಗಿದೆ. ಸಂಜೆ 4ರ ವರೆಗೆ ನಡೆಯುತ್ತಿದ್ದ ಕೆಲವು ಕಾಲೇಜುಗಳ ಸಮಯವನ್ನು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ನಡೆಸಲಾಗುತ್ತಿದೆ.
ಮಂಗಳೂರಿನಲ್ಲಿ ಕೆಲವು ದಿನದ ಹಿಂದೆ 3 ದಿನ ನೀರಿನ ಪೂರೈಕೆ ಸ್ಥಗಿತವಾಗಿದ್ದ ಕಾರಣದಿಂದ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಆನ್ಲೈನ್ ತರಗತಿ ನಡೆಸಲಾಗಿತ್ತು. ಬಳಿಕ ಟ್ಯಾಂಕರ್ ನೀರು ತರಿಸಿ ತರಗತಿ ನಡೆಸಲಾಗಿತ್ತು. ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಸ್ಥಳೀಯಾಡಳಿತದ ನೀರಿನ ವ್ಯವಸ್ಥೆ ಸರಿಯಾಗಿ ಲಭ್ಯವಿಲ್ಲದ ಕಾರಣದಿಂದ ಟ್ಯಾಂಕರ್ ನೀರನ್ನೇ ಆಶ್ರಯಿಸುವಂತಾಗಿದೆ.
Water scarcity third time after 2016 and 2019 in Mangalore, water for two weeks for city left in dam, colleges in city face trouble.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm