ಬ್ರೇಕಿಂಗ್ ನ್ಯೂಸ್
28-10-20 02:57 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿರುವ ಗುಜರಾತ್, ರಾಜಸ್ಥಾನ ಮೂಲದ ಮಾರ್ವಾಡಿಗಳನ್ನು ಓಡಿಸಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಪರ - ವಿರೋಧ ಕೇಳಿಬಂದಿದ್ದು ಶಾಂತಿ ಕದಡುವ ಮುನ್ನ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಮಾರ್ವಾಡಿ ಹಟಾವೋ ಅಭಿಯಾನ ಆರಂಭಿಸಿದ್ದಾರೆ. ನಮ್ಮೂರು ನಮ್ಮ ಜನ, ನಮ್ಮ ವ್ಯಾಪಾರ ನಮ್ಮ ಜನರಿಗೆ... ಮಾರ್ವಾಡಿ ಹಠಾವೋ.. ಎಂಬ ಪೋಸ್ಟ್ ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ. ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು, ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನದ ಹಿಂದೆ ಮುಸ್ಲಿಂ ವರ್ತಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹಿಂದು ಸಂಘಟನೆಗಳೂ ಎಂಟ್ರಿ ಕೊಟ್ಟಿವೆ.


ರಾಜಸ್ಥಾನ ವ್ಯಾಪಾರಿಗಳ ಪರವಾಗಿ ಹಿಂದೂ ಸಂಘಟನೆಗಳು ಬೆಂಬಲ ನೀಡಿವೆ. ಕೆಲವು ಕಾರ್ಯಕರ್ತರು ಬಹಿರಂಗವಾಗಿಯೇ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದು ಭಾರತದ ಪ್ರಜೆಗಳಿಗೆ ದೇಶದ ಎಲ್ಲಿ ಬೇಕಾದರೂ ವ್ಯಾಪಾರ ಮಾಡಲು ಅವಕಾಶವಿದೆ. ಅವರು ಬಾಂಗ್ಲಾ ದೇಶಿಗರಲ್ಲ. ಪಾಕಿಸ್ತಾನದವರೂ ಅಲ್ಲ.. ನಮ್ಮದೇ ಜನ ಎಂದು ಪ್ರತಿ ಟೀಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಇಂಥ ಪೋಸ್ಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ರಾಜಸ್ಥಾನ ಮೂಲದ ವ್ಯಾಪಾರಿಗಳು ಮೋಸ ಮಾಡುತ್ತಾರೆ ಎಂಬ ವೀಡಿಯೋ ಹರಿಬಿಟ್ಟು ಜನರನ್ನು ಕೆರಳಿಸುವ ಯತ್ನ ನಡೆದಿದ್ದು ಇದರಿಂದಾಗಿ ಗೊಂದಲ, ಅಭಿಯಾನ ಶುರುವಾಗಿದೆ ಎನ್ನಲಾಗುತ್ತಿದೆ.
Marvadis who are living in the parts of Karavali Karnataka should be chased groups start campaign on social media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm