ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm