ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm