ಬ್ರೇಕಿಂಗ್ ನ್ಯೂಸ್
10-05-23 11:11 am Mangalore Correspondent ಕರಾವಳಿ
ಮಂಗಳೂರು, ಮೇ 10 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆದಿದೆ. ಮೊದಲ ಎರಡು ಗಂಟೆಯ ಅಂದರೆ, 9 ಗಂಟೆ ವರೆಗಿನ ಮತದಾನದಲ್ಲಿ ಜಿಲ್ಲೆಯಲ್ಲಿ 12.47 ಶೇಕಡಾ ಮತದಾನ ದಾಖಲಾಗಿದೆ.
ಹಗಲಿನಲ್ಲಿ ಭಾರೀ ಬಿಸಿಲು ಇರುವುದರಿದಲೋ ಏನೋ ಮಂಗಳೂರು ನಗರ ಸೇರಿದಂತೆ ಬಹುತೇಕ ಹೆಚ್ಚಿನ ಮತಗಟ್ಟೆಗಳಲ್ಲಿ ಬೆಳಗ್ಗೆಯೇ ಮತದಾರರು ಸಾಲುಗಟ್ಟಿದ್ದರು. ಹಿರಿಯ ನಾಗರಿಕರು ಕೂಡ ಇನ್ನೊಬ್ಬರ ಸಹಾಯದಿಂದ ಮತ ಚಲಾಯಿಸಲು ಆಗಮಿಸಿದ್ದರು. ಈ ಬಾರಿ 80 ವರ್ಷ ಮೀರಿದವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು. ಆದರೆ ಇದಕ್ಕೆ ನೋಂದಣಿ ಮಾಡದವರಿಗೆ ವೋಟ್ ಮಾಡಲು ಅವಕಾಶ ಇರಲಿಲ್ಲ.
ಮಂಗಳೂರಿನ ಲೇಡಿಹಿಲ್ ಬಳಿಯ ಉರ್ವಾ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ ಚಲಾಯಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತುಕೊಂಡೇ ಮತ ಹಾಕಿದ್ದಾರೆ. ಇದೇ ವೇಳೆ, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿನಗರ ಮತಗಟ್ಟೆಯಲ್ಲಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೊ ಕುಟುಂಬ ಸಹಿತ ಬಂದು ಕಂಕನಾಡಿಯ ಬೆಂದೂರುವೆಲ್ ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.
ಈ ಬಾರಿ ಜಿಲ್ಲಾಡಳಿತದ ಸ್ವೀಪ್ ಕಮಿಟಿ ಮತದಾನ ಜಾಗೃತಿಗೆ ಬಹಳಷ್ಟು ಕೆಲಸ ಮಾಡಿತ್ತು. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಮತದಾನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ. 9 ಗಂಟೆ ವರೆಗಿನ ಮಾಹಿತಿ ಪ್ರಕಾರ, ಮಂಗಳೂರು ಉತ್ತರದಲ್ಲಿ 15.50 ಪರ್ಸೆಂಟ್, ಪುತ್ತೂರಿನಲ್ಲಿ 13.34 ಪರ್ಸೆಂಟ್ ಮತದಾನ ಆಗಿದೆ.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಕೆಪಿಟಿ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ್ದಾರೆ. ಉಳಿದಂತೆ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಗರ್ಡಾಡಿಯ ಶಾಲೆಯಲ್ಲಿ, ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಮುಂಡೂರಿನ ಮತಗಟ್ಟೆಯಲ್ಲಿ ಮತ ಹಾಕಿದರು.
ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಬೋಳಿಯಾರ್ ಗ್ರಾಮದ ಜಾರದಗುಡ್ಡೆ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿ, ಪತ್ನಿ, ಪುತ್ರಿ ಮತ್ತು ಬೆಂಬಲಿಗರೊಂದಿಗೆ ಫೋಟೊಗೆ ಪೋಸು ನೀಡಿದರು. ಶಾಸಕ ಯು.ಟಿ ಖಾದರ್ ಅವರ ಏಕೈಕ ಪುತ್ರಿ ಹವ್ವಾ ನಸೀಮ ತಮ್ಮ ಮೊದಲ ಹಕ್ಕನ್ನು ಜಾರದಗುಡ್ಡೆ ಶಾಲೆಯಲ್ಲಿ ತಂದೆ, ತಾಯಿಯ ಜೊತೆಗೆ ಚಲಾಯಿಸಿದರು.
Karnataka Election 2023 live, people throng to polling booths in large numbers, JR Lobo, Vedevyas Kamat, Khader, Poonja, UT Khader, Bharath Shetty, Arun Puthila casted thier votes with famiily. Voters queued up in front of their respective polling booths in large numbers in Dakshina Kannada (DK) and Udupi districts as polling for the Karnataka assembly elections began at 7 am.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm