ಬ್ರೇಕಿಂಗ್ ನ್ಯೂಸ್
10-05-23 11:11 am Mangalore Correspondent ಕರಾವಳಿ
ಮಂಗಳೂರು, ಮೇ 10 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆದಿದೆ. ಮೊದಲ ಎರಡು ಗಂಟೆಯ ಅಂದರೆ, 9 ಗಂಟೆ ವರೆಗಿನ ಮತದಾನದಲ್ಲಿ ಜಿಲ್ಲೆಯಲ್ಲಿ 12.47 ಶೇಕಡಾ ಮತದಾನ ದಾಖಲಾಗಿದೆ.
ಹಗಲಿನಲ್ಲಿ ಭಾರೀ ಬಿಸಿಲು ಇರುವುದರಿದಲೋ ಏನೋ ಮಂಗಳೂರು ನಗರ ಸೇರಿದಂತೆ ಬಹುತೇಕ ಹೆಚ್ಚಿನ ಮತಗಟ್ಟೆಗಳಲ್ಲಿ ಬೆಳಗ್ಗೆಯೇ ಮತದಾರರು ಸಾಲುಗಟ್ಟಿದ್ದರು. ಹಿರಿಯ ನಾಗರಿಕರು ಕೂಡ ಇನ್ನೊಬ್ಬರ ಸಹಾಯದಿಂದ ಮತ ಚಲಾಯಿಸಲು ಆಗಮಿಸಿದ್ದರು. ಈ ಬಾರಿ 80 ವರ್ಷ ಮೀರಿದವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು. ಆದರೆ ಇದಕ್ಕೆ ನೋಂದಣಿ ಮಾಡದವರಿಗೆ ವೋಟ್ ಮಾಡಲು ಅವಕಾಶ ಇರಲಿಲ್ಲ.


















ಮಂಗಳೂರಿನ ಲೇಡಿಹಿಲ್ ಬಳಿಯ ಉರ್ವಾ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ ಚಲಾಯಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತುಕೊಂಡೇ ಮತ ಹಾಕಿದ್ದಾರೆ. ಇದೇ ವೇಳೆ, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿನಗರ ಮತಗಟ್ಟೆಯಲ್ಲಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೊ ಕುಟುಂಬ ಸಹಿತ ಬಂದು ಕಂಕನಾಡಿಯ ಬೆಂದೂರುವೆಲ್ ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.
ಈ ಬಾರಿ ಜಿಲ್ಲಾಡಳಿತದ ಸ್ವೀಪ್ ಕಮಿಟಿ ಮತದಾನ ಜಾಗೃತಿಗೆ ಬಹಳಷ್ಟು ಕೆಲಸ ಮಾಡಿತ್ತು. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಮತದಾನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ. 9 ಗಂಟೆ ವರೆಗಿನ ಮಾಹಿತಿ ಪ್ರಕಾರ, ಮಂಗಳೂರು ಉತ್ತರದಲ್ಲಿ 15.50 ಪರ್ಸೆಂಟ್, ಪುತ್ತೂರಿನಲ್ಲಿ 13.34 ಪರ್ಸೆಂಟ್ ಮತದಾನ ಆಗಿದೆ.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಕೆಪಿಟಿ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ್ದಾರೆ. ಉಳಿದಂತೆ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಗರ್ಡಾಡಿಯ ಶಾಲೆಯಲ್ಲಿ, ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಮುಂಡೂರಿನ ಮತಗಟ್ಟೆಯಲ್ಲಿ ಮತ ಹಾಕಿದರು.
ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಬೋಳಿಯಾರ್ ಗ್ರಾಮದ ಜಾರದಗುಡ್ಡೆ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿ, ಪತ್ನಿ, ಪುತ್ರಿ ಮತ್ತು ಬೆಂಬಲಿಗರೊಂದಿಗೆ ಫೋಟೊಗೆ ಪೋಸು ನೀಡಿದರು. ಶಾಸಕ ಯು.ಟಿ ಖಾದರ್ ಅವರ ಏಕೈಕ ಪುತ್ರಿ ಹವ್ವಾ ನಸೀಮ ತಮ್ಮ ಮೊದಲ ಹಕ್ಕನ್ನು ಜಾರದಗುಡ್ಡೆ ಶಾಲೆಯಲ್ಲಿ ತಂದೆ, ತಾಯಿಯ ಜೊತೆಗೆ ಚಲಾಯಿಸಿದರು.
Karnataka Election 2023 live, people throng to polling booths in large numbers, JR Lobo, Vedevyas Kamat, Khader, Poonja, UT Khader, Bharath Shetty, Arun Puthila casted thier votes with famiily. Voters queued up in front of their respective polling booths in large numbers in Dakshina Kannada (DK) and Udupi districts as polling for the Karnataka assembly elections began at 7 am.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm