ಬ್ರೇಕಿಂಗ್ ನ್ಯೂಸ್
12-05-23 11:16 am Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ನಿನ್ನೆ ರಾತ್ರಿ ಮೂವರು ಯುವಕರು ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಮೂವರು ಯುವಕರು ಬೈಕನ್ನು ದೇವಾಲಯದ ಅಂಗಣಕ್ಕೆ ನುಗ್ಗಿಸಿದ್ದಾರೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯವರು, ಯಾಕಾಗಿ ಚಪ್ಪಲಿ ಹಾಕಿ ಒಳಗೆ ಬಂದಿದ್ದೀರಿ. ಬೈಕ್ ಹಿಡ್ಕೊಂಡೇ ಒಳಗೆ ಬಂದಿದ್ದೀರಲ್ಲಾ ಎಂದು ಕೇಳಿದ್ದಾರೆ. ನಾವು ಅಸೈಗೋಳಿಯವರು. ಕಾಟಿಪಳ್ಳ ಹೋಗುತ್ತಿದ್ದೇವೆ ಎಂದಿದ್ದಾರೆ. ಕಳ್ಳತನಕ್ಕೆ ಬಂದಿರೋದಾ ಎಂಬ ಪ್ರಶ್ನೆಗೆ, ಉತ್ತರ ನೀಡುತ್ತಿರಲಿಲ್ಲ. ಅಸೈಗೋಳಿ ನಿವಾಸಿಗಳೆಂದು ಹೇಳಿಕೊಂಡಿದ್ದು ಹಸನ್ ಶಾಹಿನ್, ಜಾಫರ್ ಹಾಗೂ ಫಾರೂಕ್ ಎಂದು ಗುರುತಿಸಲಾಗಿದೆ. ಬಳಿಕ ಬಜರಂಗದಳ ಕಾರ್ಯಕರ್ತರು ಸೇರಿ ಮೂವರನ್ನು ಕದ್ರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ಆದರೆ ಮೂವರು ಯುವಕರು ಕೂಡ ಒಂದೇ ಪ್ರಾಯದವರಾಗಿದ್ದು 18-19ರ ಹಾಗಿದ್ದಾರೆ. ಆರು ತಿಂಗಳ ಹಿಂದೆ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್, ಕದ್ರಿ ದೇಗುಲದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ. ಇದೀಗ ರಾತ್ರಿ ವೇಳೆ ಆಗಂತುಕರ ರೀತಿ ಬಂದು ಯುವಕರು ಅಂಗಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದು ಇದರ ಬಗ್ಗೆ ಸಂಶಯ ವ್ಯಕ್ತವಾಗಿದೆ.
Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am