ಬ್ರೇಕಿಂಗ್ ನ್ಯೂಸ್
13-05-23 03:03 pm Udupi Correspondent ಕರಾವಳಿ
ಉಡುಪಿ, ಮೇ 13: ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಕಮಲ ಪಾಳಯದ ಕೈ ಹಿಡಿದಿದ್ದು, ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ಸುನೀಲ್ ಕುಮಾರ್ ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು.
ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬಿಜೆಪಿ ಬಾವುಟ ಹಾರಿಸಿದ್ದಾರೆ.
ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.
ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.
Udupi major victory for BJP in all 5 constituency, new faces Yashpal Suvarna, Gururaj Shetty Gantihole, Gurme Suresh Shetty,Kiran Kumar Kodgi make impact. BJP leads in 11 out of 13 constituencies of DK-Udupi twin districts
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm