ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm