ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm