ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm