ಬ್ರೇಕಿಂಗ್ ನ್ಯೂಸ್
18-05-23 01:00 pm Mangalore Correspondent ಕರಾವಳಿ
ಉಳ್ಳಾಲ, ಮೇ 18: ಕೆಲವರು ದಿಢೀರ್ ಶ್ರೀಮಂತರಾಗಲು ಬಯಸಿ ಲಾಟರಿ ಟಿಕೆಟ್ ತೆಗೆದು ಬಂಪರ್ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತ ಇರೋರಿದ್ದಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಹೀಗಾಗಿ ಏಜೆನ್ಸಿಯವರೇ ಬಂಪರ್ ಗೆದ್ದ ವಿಜೇತನಿಗಾಗಿ ಕಾದು ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ.
ತಲಪಾಡಿಯ ಅಮಲ್ ಕನಕದಾಸ ಅವರಿಗೆ ಸೇರಿದ ತಲಪಾಡಿಯ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮಾರಾಟವಾದ ಟಿಕೆಟಿಗೆ ಕೇರಳ ರಾಜ್ಯದ ಅಕ್ಷಯ ಲಾಟರಿಯ ಬಂಪರ್ ಬಹುಮಾನ ಬಂದಿದೆ, ಕೇರಳ ಗಡಿಭಾಗ ಕರ್ನಾಟಕದ ಮಂಗಳೂರು, ಮಂಜೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಯಲ್ಲಿ ಮಾರಾಟವಾದ ಮೇ 7ರ ಅಕ್ಷಯಾ ಲಾಟರಿ ಎ.ಟಿ. 317545 ಟಿಕೆಟಿಗೆ ಎಪ್ಪತ್ತು ಲಕ್ಷ ಬಂಪರ್ ಬಹುಮಾನ ಬಂದಿದ್ದು, ಈ ಟಿಕೆಟ್ ಪಡೆದುಕೊಂಡ ಅದೃಷ್ಟ ಶಾಲಿಗೆ ಹುಡುಕಾಟ ನಡೆಯುತ್ತಿದೆ.

ಕನಕದಾಸ ಅವರ ಏಜೆನ್ಸಿಗೆ ಕೆಲ ತಿಂಗಳ ಹಿಂದೆ ಕೆ.ಸಿ. ರೋಡ್ನ ವ್ಯಕ್ತಿಯೊಬ್ಬರಿಗೆ 75 ಲಕ್ಷ ರೂ. ಮತ್ತು ಕೋಟೆಕಾರು ಒಲವಿನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೆಕ್ಯುರಿಟಿ ಗಾರ್ಡ್ ಗೆ ಒಂದು ಕೋಟಿ ರೂ. ಬಹುಮಾನ ಬಂದಿದ್ದು, ಒಟ್ಟು ನಾಲ್ಕು ಬಾರಿ ಬಂಪರ್ ಬಹುಮಾನ ಬಂದಿತ್ತು. ಇದೀಗ ಅದೃಷ್ಟಶಾಲಿಯ ಹುಡುಕಾಟ ನಡೆಯುತ್ತಿದ್ದು, ಕರ್ನಾಟಕ - ಕೇರಳ ಗಡಿಭಾಗದವರೇ ಈ ವಿಜೇತರು ಇರಬಹುದು ಎಂದು ಅಮಲ್ ಕನಕದಾಸ್ ತಿಳಿಸಿದ್ದಾರೆ.
Mangalore Kerala lottery Man wins 70 lakhs lottery, doesn't Appear to collect money, Talapady Jayamma lottery frim requests to collect money.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm