ಬ್ರೇಕಿಂಗ್ ನ್ಯೂಸ್
21-05-23 10:12 am Mangalore Correspondent ಕರಾವಳಿ
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ , ಕುಂಜತ್ತೂರು ನಿವಾಸಿ ಬಿ.ಫಾತಿಮಾ(85) ಮೃತಪಟ್ಟ ವೃದ್ಧೆ. ಫಾತಿಮಾ ಅವರು ತನ್ನ ಮಗ ಮೂಸ(50), ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಸಂಜೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ ಶವಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಫಾತಿಮಾ ಓಮ್ನಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದು ಮೊಮ್ಮಗ ಮುಸ್ತಫಾ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ನಿದ್ದೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.



ಘಟನೆಯನ್ನ ಕಂಡ ವಾಹನ ಸವಾರರೊಬ್ಬರು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಲ್ಲಿ ವಿಚಾರ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಸಿಬ್ಬಂದಿಗಳಾದ ಮಹೇಶ್ ಆಚಾರ್ಯ ಮತ್ತು ವಿಠ್ಠಲ್ ದಾಸ್ ಅವರು ಕಬ್ಬಿಣದ ಸಲಾಕೆಯೆಡೆಯಲ್ಲಿ ಸಿಲುಕಿ ಛಿಧ್ರಗೊಂಡಿದ್ದ ಫಾತಿಮಾರನ್ನ ಹೊರಗೆಳೆದು ರಕ್ತದ ಮಡುವಲ್ಲಿದ್ದ ಮೂವರನ್ನ ತಮ್ಮ ಇಲಾಖಾ ವಾಹನದಲ್ಲಿ ತುಂಬಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ದೇಹ ಛಿದ್ರಗೊಂಡು ಗಂಭೀರ ಗಾಯಗೊಂಡಿದ್ದ ಫಾತಿಮಾ ಅವರು ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ದೇಹದ ಮಾಂಸ ಖಂಡಗಳು ಕಾರಿನಲ್ಲೇ ಉಳಿದಿವೆ. ಕಾರು ಚಲಾಯಿಸುತ್ತಿದ್ದ ಮುಸ್ತಾಫನ ಕಾಲು ಮುರಿದಿದೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni car accident at Uchila in Mangalore, 85 year old killed, three hospitalised. The three were shifited by Traffic police constable in the early morning.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm