ಬ್ರೇಕಿಂಗ್ ನ್ಯೂಸ್
21-05-23 10:12 am Mangalore Correspondent ಕರಾವಳಿ
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ , ಕುಂಜತ್ತೂರು ನಿವಾಸಿ ಬಿ.ಫಾತಿಮಾ(85) ಮೃತಪಟ್ಟ ವೃದ್ಧೆ. ಫಾತಿಮಾ ಅವರು ತನ್ನ ಮಗ ಮೂಸ(50), ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಸಂಜೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ ಶವಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಫಾತಿಮಾ ಓಮ್ನಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದು ಮೊಮ್ಮಗ ಮುಸ್ತಫಾ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ನಿದ್ದೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.
ಘಟನೆಯನ್ನ ಕಂಡ ವಾಹನ ಸವಾರರೊಬ್ಬರು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಲ್ಲಿ ವಿಚಾರ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಸಿಬ್ಬಂದಿಗಳಾದ ಮಹೇಶ್ ಆಚಾರ್ಯ ಮತ್ತು ವಿಠ್ಠಲ್ ದಾಸ್ ಅವರು ಕಬ್ಬಿಣದ ಸಲಾಕೆಯೆಡೆಯಲ್ಲಿ ಸಿಲುಕಿ ಛಿಧ್ರಗೊಂಡಿದ್ದ ಫಾತಿಮಾರನ್ನ ಹೊರಗೆಳೆದು ರಕ್ತದ ಮಡುವಲ್ಲಿದ್ದ ಮೂವರನ್ನ ತಮ್ಮ ಇಲಾಖಾ ವಾಹನದಲ್ಲಿ ತುಂಬಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ದೇಹ ಛಿದ್ರಗೊಂಡು ಗಂಭೀರ ಗಾಯಗೊಂಡಿದ್ದ ಫಾತಿಮಾ ಅವರು ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ದೇಹದ ಮಾಂಸ ಖಂಡಗಳು ಕಾರಿನಲ್ಲೇ ಉಳಿದಿವೆ. ಕಾರು ಚಲಾಯಿಸುತ್ತಿದ್ದ ಮುಸ್ತಾಫನ ಕಾಲು ಮುರಿದಿದೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni car accident at Uchila in Mangalore, 85 year old killed, three hospitalised. The three were shifited by Traffic police constable in the early morning.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:00 pm
HK News Desk
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am