ಬ್ರೇಕಿಂಗ್ ನ್ಯೂಸ್
21-05-23 10:12 am Mangalore Correspondent ಕರಾವಳಿ
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ , ಕುಂಜತ್ತೂರು ನಿವಾಸಿ ಬಿ.ಫಾತಿಮಾ(85) ಮೃತಪಟ್ಟ ವೃದ್ಧೆ. ಫಾತಿಮಾ ಅವರು ತನ್ನ ಮಗ ಮೂಸ(50), ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಸಂಜೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ ಶವಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಫಾತಿಮಾ ಓಮ್ನಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದು ಮೊಮ್ಮಗ ಮುಸ್ತಫಾ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ನಿದ್ದೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.



ಘಟನೆಯನ್ನ ಕಂಡ ವಾಹನ ಸವಾರರೊಬ್ಬರು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಲ್ಲಿ ವಿಚಾರ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಸಿಬ್ಬಂದಿಗಳಾದ ಮಹೇಶ್ ಆಚಾರ್ಯ ಮತ್ತು ವಿಠ್ಠಲ್ ದಾಸ್ ಅವರು ಕಬ್ಬಿಣದ ಸಲಾಕೆಯೆಡೆಯಲ್ಲಿ ಸಿಲುಕಿ ಛಿಧ್ರಗೊಂಡಿದ್ದ ಫಾತಿಮಾರನ್ನ ಹೊರಗೆಳೆದು ರಕ್ತದ ಮಡುವಲ್ಲಿದ್ದ ಮೂವರನ್ನ ತಮ್ಮ ಇಲಾಖಾ ವಾಹನದಲ್ಲಿ ತುಂಬಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ದೇಹ ಛಿದ್ರಗೊಂಡು ಗಂಭೀರ ಗಾಯಗೊಂಡಿದ್ದ ಫಾತಿಮಾ ಅವರು ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ದೇಹದ ಮಾಂಸ ಖಂಡಗಳು ಕಾರಿನಲ್ಲೇ ಉಳಿದಿವೆ. ಕಾರು ಚಲಾಯಿಸುತ್ತಿದ್ದ ಮುಸ್ತಾಫನ ಕಾಲು ಮುರಿದಿದೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni car accident at Uchila in Mangalore, 85 year old killed, three hospitalised. The three were shifited by Traffic police constable in the early morning.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm