ಬ್ರೇಕಿಂಗ್ ನ್ಯೂಸ್
21-05-23 01:52 pm Mangalore Correspondent ಕರಾವಳಿ
ಬಂಟ್ವಾಳ, ಮೇ 21: ಬೇಸಗೆ ಕಳೆದು ಮಳೆಗಾಲಕ್ಕೆ ಹತ್ತಿರ ಆಗುತ್ತಿದ್ದರೂ, ಈ ಬಾರಿ ಮಳೆಯ ದರ್ಶನ ಆಗದೇ ಇರುವುದರಿಂದ ಕರಾವಳಿಯ ಜೀವನದಿ ನೇತ್ರಾವತಿ ಪೂರ್ತಿ ಬತ್ತಿಹೋಗಿದೆ. ಬಂಟ್ವಾಳ ಪೇಟೆಯನ್ನು ಸುತ್ತಿಹಾಕಿ ಹರಿಯುವ ನದಿಯಲ್ಲೀಗ ಅನಾದಿ ಕಾಲದ ಜೀವನ ದರ್ಶನ ಪ್ರತಿಫಲನ ಆಗುತ್ತಿದೆ. ನೀರಿಲ್ಲದೆ ಬರಡಾಗಿರುವ ನದಿಯ ತಳದಲ್ಲಿ ಬಂಡೆಕಲ್ಲುಗಳ ಕೆತ್ತನೆ, ದೇವರ ಪಾಣಿಪೀಠದ ದರ್ಶನ ಕುತೂಹಲ ಮೂಡಿಸಿದೆ.
ಬಂಟ್ವಾಳ ಪೇಟೆಯ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ನದಿಯ ತಳದಲ್ಲಿ ಕುತೂಹಲ ಮೂಡಿಸುವ ಚಿತ್ರಣ ಕಂಡುಬಂದಿದೆ. ಬಂಡೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಪ್ರಾಚೀನ ಬದುಕಿನ ಚಿತ್ರಣ ಕಂಡುಬರುತ್ತದೆ. ಇತಿಹಾಸಕಾರರು ಅಧ್ಯಯನಕ್ಕೆ ಹೊರಟರೆ, ಹಳೆಕಾಲದ ಜನರ ಬದುಕು- ಬವಣೆಯ ಚಿತ್ರಣ ಸಿಗಬಹುದು. ಅಪರೂಪಕ್ಕೆ ಇಂಥ ನೀರಿಲ್ಲದ ವಿದ್ಯಮಾನ ಆಗುತ್ತಿರುವುದರಿಂದ ಸ್ಥಳೀಯರಿಗೆ ಅಚ್ಚರಿಯ ನೋಟಗಳು ಕಾಣಸಿಗುತ್ತವೆ. ಶಿವ, ನಂದಿ, ಪಾಣಿಪೀಠ, ಚೆನ್ನಮಣೆ, ಊಟದ ಬಟ್ಟಲು, ಜಡೆ, ಸೂರ್ಯಚಂದ್ರ, ಕಾಲಿನ ಪಾದದ ಆಕೃತಿ... ಹೀಗೆ ಗಮನಿಸುತ್ತಾ ಹೋದರೆ ಶಿಲೆಗಳ ನಡುವೆ ಹುದುಗಿ ಹೋಗಿರುವ ಅನಾದಿಕಾಲದ ಇತಿಹಾಸದ ದರ್ಶನ ಆಗುತ್ತದೆ.




ಈ ಬಗ್ಗೆ ಸ್ಥಳೀಯ ಹಿರಿಯರಾದ ಬಂಟ್ವಾಳ ಪುರಸಭೆ ಸದಸ್ಯ ಗೋವಿಂದ ಪ್ರಭು ಅವರಲ್ಲಿ ಕೇಳಿದಾಗ, ನಾವು ಸಣ್ಣದಿರುವಾಗಲೂ ಇದೇ ರೀತಿ ನದಿಯಲ್ಲಿ ನೀರು ಖಾಲಿಯಾದಾಗ ಸೀತಾದೇವಿ ಪಾದ ಎಂದು ನೋಡಲು ಬರುತ್ತಿದ್ದೆವು. ಈಶ್ವರ ದೇವರು, ಪಾಣಿಪೀಠ, ಕಲ್ಲಿನ ಬಟ್ಟಲು, ಚೆನ್ನೆಮಣೆ ಇವೆಲ್ಲ ಕಾಣಸಿಗುತ್ತಿದ್ದವು. ಈ ಬಾರಿ ನೀರು ಖಾಲಿಯಾಗಿದ್ದರಿಂದ ಮತ್ತೆ ಅದೇ ರೀತಿಯ ಚಿತ್ರಣ ಕಂಡಿದೆ. ಅನಾದಿ ಕಾಲದಲ್ಲಿ ಯಾರೋ ಸಾಧಕರು, ಸಂತರು ಇಲ್ಲಿ ಪೂಜೆ ಮಾಡುತ್ತಿದ್ದಿರಬಹುದು ಎಂಬ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.



ಹಿಂದೆಲ್ಲ ಪ್ರಾಚೀನ ಕಾಲದಲ್ಲಿ ನದಿ ಬದಿಯಲ್ಲೇ ನಾಗರಿಕತೆಗಳು ಬೆಳೆದಿದ್ದವು. ಅಂದರೆ, ಜನರು ನದಿ ಬದಿಗಳಲ್ಲಿ ವಾಸ ಇರುತ್ತಿದ್ದರು. ಅಂಥ ಸಂದರ್ಭದಲ್ಲಿ ಪೂಜೆ, ಪುನಸ್ಕಾರಕ್ಕೆ ಕಲ್ಲುಗಳೇ ದೇವರಾಗಿದ್ದವು. ನಿಧಾನಕ್ಕೆ ಇಂಥ ಕುರುಹುಗಳು ನದಿಯ ತಳಕ್ಕೆ ಸೇರಿಹೋಗಿದ್ದಿರಬಹುದು. ಬಂಟ್ವಾಳದಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ಹಳೆಕಾಲದವಾಗಿದ್ದು ನದಿ ತಳದಲ್ಲಿ ಸಿಕ್ಕಿರುವ ಕುರುಹುಗಳಿಗೂ ದೇವಸ್ಥಾನಕ್ಕೂ ಸಂಬಂಧ ಇದ್ದಿರಲೂಬಹುದು. ಇದೇನಿದ್ದರೂ, ನದಿಯ ತಳದಲ್ಲಿ ಬಂಡೆ ಕಲ್ಲುಗಳ ಚಿತ್ರಣ, ನೀರಿನ ಸವೆತಕ್ಕೆ ಸಿಲುಕಿ ಆಕರ್ಷಣೆ ಮೂಡಿಸುವ ಶಿಲೆಗಳು ಸ್ಥಳೀಯರ ಆಕರ್ಷಣೆಗೆ ಕಾರಣವಾಗಿವೆ.
Ancient Engravings of gods found in Rocks at Netravati river at Bantwal in Mangalore. These engravings were found behind the Mahalingeshwara Temple. The rocks found here have the ancient engravings of religious practises. Shiva, Nandi, Pranipeeta and many more engravings have been found.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm