ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm