ಬ್ರೇಕಿಂಗ್ ನ್ಯೂಸ್
21-05-23 08:41 pm Mangalore Correspondent ಕರಾವಳಿ
ಮಂಗಳೂರು, ಮೇ 21 : ಮಂಗಳೂರು ಮೂಲದ 21 ವರ್ಷದ ಮುಸ್ಲಿಂ ಯುವತಿಯೊಬ್ಬಳು ವಿಮಾನ ಚಲಾಯಿಸುವ ಪೈಲಟ್ ಹುದ್ದೆಗೇರಿ ಹುಬ್ಬೇರಿಸಿದ್ದಾಳೆ. ಪಾಂಡೇಶ್ವರ ನಿವಾಸಿ ಹನಿಯಾ ಹನೀಫ್ ಈ ಸಾಧನೆ ಮಾಡಿದ ಯುವತಿ.
ಪಾಂಡೇಶ್ವರದ ಮಹಮ್ಮದ್ ಹನೀಫ್ ಮತ್ತು ನಜಿಯಾ ದಂಪತಿ ಪುತ್ರಿಯಾಗಿರುವ ಹನಿಯಾ ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆದಿದ್ದಾರೆ. ಹನಿಯಾ ಸಣ್ಣದಿರುವಾಗ ದುಬೈನಲ್ಲಿದ್ದು ಒಂಬತ್ತನೇ ಕ್ಲಾಸ್ ವರೆಗೆ ಅಲ್ಲಿನ ಇಂಡಿಯನ್ ಹೈಸ್ಕೂಲ್ ನಲ್ಲಿ ಶಿಕ್ಷಣ ಪಡೆದಿದ್ದಳು. ಎಸ್ಸೆಸ್ಸೆಲ್ಸಿ ಶಿಕ್ಷಣವನ್ನು ಮಂಗಳೂರಿನ ಬಿಜೈನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನಲ್ಲಿ ಪೂರೈಸಿದ್ದಳು. ಆನಂತರ, ಮಹೇಶ್ ಪಿಯು ಕಾಲೇಜಿನಲ್ಲಿ ಪಿಯು ಶಿಕ್ಷಣ ಪೂರೈಸಿದ್ದಳು.
ಸಣ್ಣವಳಿದ್ದಾಗಿನಿಂದಲು ದುಬೈಗೆ ವಿಮಾನದಲ್ಲಿ ಹೋಗಿ ಬರುತ್ತಿದ್ದರಿಂದ ತಾನೂ ವಿಮಾನ ಚಲಾಯಿಸಬೇಕು, ಪೈಲಟ್ ಆಗಬೇಕೆಂಬ ಕನಸು ಕಂಡಿದ್ದಳು. ಹನಿಯಾಳ ಬಯಕೆಗೆ ಹೆತ್ತವರು ಸ್ಪಂದಿಸಿದ್ದು ಪೈಲಟ್ ಕಲಿಯುವುದಕ್ಕಾಗಿ ಮೈಸೂರಿನ ಓರಿಯಂಟ್ ಫ್ಲೈಟ್ ಏವಿಯೇಶನ್ ಅಕಾಡೆಮಿಗೆ ಸೇರಿಸಿದ್ದರು. ಪಿಯುಸಿ ಬಳಿಕ ಅಲ್ಲಿ ಮೂರೂವರೆ ವರ್ಷಗಳ ಕಾಲ ಪೈಲಟ್ ತರಬೇತಿ ಪಡೆದಿದ್ದು, ಇತ್ತೀಚೆಗೆ ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ 200 ಗಂಟೆಗಳ ವಿಮಾನ ಚಾಲನೆ ಮಾಡಿ, ಈ ಸಾಧನೆ ಮಾಡಿದ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ.
ಸಣ್ಣದಿರುವಾಗಲೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದುದರಿಂದ ಪೈಲಟ್ ಆಗಬೇಕೆಂಬ ಕನಸು ಕಂಡಿದ್ದೆ. ಪೈಲಟ್ ಆಗುವುದು ನನಗೆ ಸುಲಭದ ದಾರಿಯಾಗಿರಲಿಲ್ಲ. ಮಹಿಳೆಯರನ್ನು ಈ ವೃತ್ತಿಗೆ ಇಳಿಸಲು ಸಾಮಾನ್ಯವಾಗಿ ಹೆತ್ತವರು ಬಿಡುವುದಿಲ್ಲ. ಆದರೆ ನನಗೆ ಹೆತ್ತವರೇ ಪ್ರೋತ್ಸಾಹಿಸಿ, ಅವಕಾಶ ಕೊಟ್ಟರು. ಆಮೂಲಕ ಕಮರ್ಶಿಯಲ್ ಪೈಲಟ್ ಆಗುವಂತಾಯಿತು ಎಂದು ಹನಿಯಾ ಹನೀಫ್ ಹೇಳುತ್ತಾರೆ. ಆಕೆಯ ತಾಯಿ ನಜಿಯಾ ಕೂಡ ಮಗಳು ಪೈಲಟ್ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಣ್ಣ ಹುಡುಗಿಯಾಗಿದ್ದಾಗಲೇ ಪೈಲಟ್ ಆಗುತ್ತೇನೆಂದು ಹೇಳಿಕೊಂಡಿದ್ದಳು. ಆಕೆಯ ಕನಸು ಈಡೇರಿಸಲು ನಾವು ಬೆಂಬಲ ನೀಡಿದ್ದೆವು. ಈಗ ಮಗಳು ವಿಮಾನ ಚಲಾಯಿಸುವುದನ್ನು ನೋಡಿ ತುಂಬ ಸಂತಸವಾಗಿದೆ ಎಂದು ಹೇಳಿದ್ದಾರೆ.
Haniya Haneef, a resident of Pandeshwar in the city, has brought immense pride to the coastal district by becoming a pilot at the age of 21. Haniya Haneef, the daughter of Mohammed Hanif and Naziya, residents of Pandeshwar, has obtained an authorized commercial pilot license.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm