ಬ್ರೇಕಿಂಗ್ ನ್ಯೂಸ್
29-10-20 05:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 29: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ಮುಚ್ಚಿ ಹಾಕಲು ತೆರೆಮರೆಯಲ್ಲಿ ಕಸರತ್ತು ನಡೆಸಿದ ಆರೋಪ ಎದುರಿಸುತ್ತಿರುವ ಪ್ರೊ.ಅರವಿ ಅವರನ್ನು ಸರಕಾರಿ ಸೇವೆಯಿಂದೇ ವಜಾಗೊಳಿಸಲು ಸಿಂಡಿಕೇಟ್ ಸಭೆ ನಿರ್ಧಾರ ಕೈಗೊಂಡಿದೆ.
ಬುಧವಾರ ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಗಂಭೀರ ಪ್ರಕರಣವಾಗಿದ್ದು, ಇದಕ್ಕೆ ವೃತ್ತಿ ಬಹಿಷ್ಕಾರ ಶಿಕ್ಷೆಯೇ ಸೂಕ್ತ ಎಂದು ನಿರ್ಣಯಕ್ಕೆ ಬರಲಾಗಿದೆ. ಆದರೆ, ಪ್ರೊಫೆಸರ್ ಆಗಿರುವ ವ್ಯಕ್ತಿಯನ್ನು ನೇರವಾಗಿ ತೆಗೆದು ಹಾಕುವಂತಿಲ್ಲ. ಆ ಕುರಿತು ಅಗತ್ಯ ಪ್ರಕ್ರಿಯೆ ನಡೆಯಬೇಕಾಗಿರುವುದರಿಂದ ಮೊದಲಿಗೆ ವಿವಿಯಿಂದ ನೋಟೀಸ್ ನೀಡಲು ನಿರ್ಧರಿಸಲಾಗಿದೆ.
ಇದೇ ವೇಳೆ, ಮಹಿಳಾ ಆಯೋಗವೂ ಪ್ರೊ.ಅರಬಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರೆ ವಜಾ ಶಿಕ್ಷೆ ತಕ್ಷಣವೇ ಜಾರಿಗೊಳಿಸುವ ಸಾಧ್ಯತೆಯಿದೆ. ಪ್ರೊ.ಅರಬಿ ಸೇವೆಯಿಂದ ವಜಾಗೊಂಡರೆ ಮಂಗಳೂರು ವಿವಿಯಲ್ಲಿ ಪ್ರೊಫೆಸರ್ ವಜಾ ಆಗುತ್ತಿರುವ 2ನೇ ಪ್ರಕರಣ ಇದಾಗಲಿದೆ. 10 ವರ್ಷಗಳ ಹಿಂದೆ ಪ್ರೊ.ತಿಪ್ಪೇಸ್ವಾಮಿ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿತ್ತು.
2018ರಲ್ಲಿ ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಅರಬಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳು ಕುಲಸಚಿವರಿಗೆ ದೂರು ನೀಡಿದ್ದರು. ಕುಲಸಚಿವರು ನಿರ್ಲಕ್ಷ್ಯ ವಹಿಸಿದ್ದರಿಂದ ಬಳಿಕ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಹಿಳಾ ಆಯೋಗದಿಂದ ಕೂಡಲೇ ಪ್ರಕರಣದ ತನಿಖೆ ನಡೆಸುವಂತೆ ಸೂಚನೆ ಬಂದಿತ್ತು. ಅದರಂತೆ, ಮಹಿಳಾ ಪ್ರೊಫೆಸರ್ ಮತ್ತು ವಕೀಲರನ್ನು ಒಳಗೊಂಡ ಆಂತರಿಕ ತನಿಖಾ ಸಮಿತಿ ರಚಿಸಿ ವಿವಿ ಆಡಳಿತ ವರದಿ ಕೇಳಿತ್ತು. ಆಬಳಿಕ ಮುಚ್ಚಿದ ಲಕೋಟೆಯಲ್ಲಿ ತನಿಖಾ ಸಮಿತಿ ನೀಡಿದ್ದ ವರದಿಯನ್ನು ವಿವಿಯ ಅಂದಿನ ಕುಲಸಚಿವ ಪ್ರೊ.ಎ.ಎಂ. ಖಾನ್, ಇಡೀ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಕಪಾಟಿನಲ್ಲೇ ಇರಿಸಿದ್ದರು.
2020ರ ಸೆಪ್ಟಂಬರ್ ತಿಂಗಳಲ್ಲಿ ಮಹಿಳಾ ಆಯೋಗ ಮತ್ತೆ ನೋಟೀಸ್ ನೀಡಿದ್ದರಿಂದ ಈಗಿನ ಕುಲಸಚಿವ ರಾಜು ಮೊಗವೀರ ಎಚ್ಚತ್ತುಕೊಂಡು ವರದಿಯನ್ನು ಕಳೆದ ಬಾರಿ ಸಿಂಡಿಕೇಟ್ ಸಭೆ ಮುಂದಿರಿಸಿದ್ದರು.
ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಅಂದಿನ ಕುಲಸಚಿವ ಎ.ಎಂ. ಖಾನ್ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ದೂರು ನೀಡುವ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಇದೆ.
Sexual Assault on student Syndicate team decides to terminate professor Arabi from Mangalore University.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm