ಬ್ರೇಕಿಂಗ್ ನ್ಯೂಸ್
23-05-23 04:52 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದು ಮಹಾಸಭಾ ಕಿಡಿಕಾರಿದ್ದು, ನಳಿನ್ ಅವರಿಗೆ ತಾಕತ್ತಿದ್ರೆ ಪಕ್ಷೇತರರಾಗಿ ಸ್ಪರ್ಧಿಸಲಿ. ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ ಅರುಣ್ ಪುತ್ತಿಲ ಪಡೆದ ಮತಕ್ಕಿಂತ ಹತ್ತು ಶೇಕಡಾ ಮತ ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಅಮೀನ್ ಹೇಳಿದ್ದಾರೆ.
ಅರುಣ್ ಪುತ್ತಿಲ ಅವರ 10% ಮತವನ್ನ ಪಡೆದು ತೋರಿಸಿ, ನಿಮ್ಗೆ ತಾಕತ್ ಇದ್ಯಾ ಅಂತ ನೋಡಿ ಬಿಡೋಣ. ಈ ನಡುವೆ ಹರೀಶ್ ಪೂಂಜಾನಂತ ಓರ್ವ ಶಾಸಕ ಸತ್ಯಜಿತ್, ತಿಮರೋಡಿ ಬಗ್ಗೆ ಮಾತಾಡ್ತಾರೆ. ಅವ್ರ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಬಿಜೆಪಿ ಶಾಸಕರಿಗೆ. ಅಧಿಕಾರ ಸಿಕ್ಕಿದ ಕೂಡ್ಲೇ ಬಾಯಿಗೆ ಬಂದಾಗೆ ಮಾತಾಡೋದು ತಪ್ಪು.
ಪೀಠದಲ್ಲಿ ಕೂರಿಸಿದ್ದೇವೋ, ಹಾಗೆಯೇ ಇಳಿಸೋದು ಗೊತ್ತು, ಹಿಂದೂ ಮಹಾಸಭಾ ಎಚ್ಚರಿಕೆ ಕೊಡ್ತಿದೆ. ನೈತಿಕತೆ ಇದ್ರೆ ಬಿಜೆಪಿ ಶಾಸಕರು ಮೌನವಾಗಿರಿ. ಸಾಧ್ಯವಾದ್ರೆ ಹಿಂದೂ ಕಾರ್ಯಕರ್ತರಿಗೆ, ಹಿಂದುತ್ವವಾದಿಗಳಿಗೆ ಸಹಾಯ ಮಾಡಿ, ಅದು ಬಿಟ್ಟು ಹಿಂಬಾಗಿಲಿನಲ್ಲಿ ಅಧಿಕಾರ ಬಳಸಿ ದೌರ್ಜನ್ಯ ಎಸೆಗೋದು ಮಾಡಿದ್ರೆ ನಾವು ಸುಮ್ಮನಿರಲ್ಲ.
ಎಲ್ಲ ಹಿಂದೂ ಸಂಘಟನೆಗಳನ್ನ ಜೊತೆ ಸೇರಿಸಿಕೊಂಡು ಬಿಜೆಪಿ ವಿರುದ್ಧ ಹೋರಾಟದ ಹಾದಿ ಹಿಡಿಯುತ್ತೇವೆ, 2024ರ ಲೋಕಸಭಾ ಚುನಾವಣೆ ಇದೆ. ನಾವು ಮೋದಿ ನೋಡಿಕೊಂಡು ಸುಮ್ಮನಿದ್ದೇವೆ, ಅದು ಬಿಟ್ಟು ನಿಮ್ಮ ಮುಖ ನೋಡಿ ಸುಮ್ಮನಿರಲ್ಲ. ಇದಕ್ಕೆಲ್ಲ ಉತ್ತರ ಕೊಡೋದಕ್ಕೂ ಬರುತ್ತೆ.
ಯಾವಾನಾದ್ರೂ ಒಬ್ಬ ಶಾಸಕನ ಮಗನಾಗಲಿ ಮಂತ್ರಿಯ ಮಗನಾಗಲಿ ಹೋರಾಟದ ಹಾದಿಯಲ್ಲಿದ್ದಾರಾ..? ಹಾಗಾಗಿ ಎಚ್ಚರಿಕೆ ಕೊಡ್ತಾ ಇದ್ದೇವೆ. ಪುತ್ತೂರಿನ ಪೊಲೀಸ್ ದೌರ್ಜನ್ಯ ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಡಿವೈಎಸ್ಪಿ ಅವರನ್ನ ಅಮಾನತು ಮಾಡ್ಬೇಕು. ಇಲ್ಲದಿದ್ದಲ್ಲಿ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಸುದ್ದಿಗೋಷ್ಟಿಯಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಎಚ್ಚರಿಕೆ ನೀಡಿದ್ದಾರೆ.
Hindu Mahasabha Dharmendra Nayaka slams BJP Nalin Kateel, challenges if he can get 10 percent of votes of Arun Puthila in Puttur standing as an Independent candidate.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm