ಬ್ರೇಕಿಂಗ್ ನ್ಯೂಸ್
23-05-23 05:28 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಪೊಲೀಸ್ ದೌರ್ಜನ್ಯದಿಂದ ತೀವ್ರ ಹಲ್ಲೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಅವಿನಾಶ್ ಅವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ಬಗ್ಗೆ ವೈದ್ಯರು ವರದಿ ಕೊಟ್ಟಿದ್ದಾರೆ. ಕಿವಿಯ ಸ್ಕ್ಯಾನಿಂಗ್ ವೇಳೆ ತಮಟೆಗೆ ಪೆಟ್ಟು ಬಿದ್ದಿರುವುದು ಕಂಡುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಆನಂತರ, ಮೇ 15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೀಡಾದ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬಂದಿದ್ದರು. ಇಬ್ಬರು ಕಾರ್ಯಕರ್ತರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಠಾಣೆಯ ಎಸ್ಐ ಮತ್ತು ಪೊಲೀಸ್ ಸಿಬಂದಿ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂಪ್ಯ ಠಾಣೆ ಎಸ್ಐ ಮತ್ತು ಸಿಬಂದಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿತ್ತು.
ತೀವ್ರ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದ್ದು ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರು ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾಗಿದ್ದು ಎರಡು ದಿನದೊಳಗೆ ಹಲ್ಲೆ ನಡೆಸಿರುವ ಡಿವೈಎಸ್ಪಿ ಅಧಿಕಾರಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕ್ರಮ ಜರುಗಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Puttur Police Autrocity over BJP banner row, Victim Avinash ear drum damaged, Arun Puthila demands DYSP suspension for brutal third degree tortured on seven hindu karyakartas arrested over footwear garland on Nalin Kateel and Sadananada Gowda banner.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm