ಬ್ರೇಕಿಂಗ್ ನ್ಯೂಸ್
26-05-23 02:45 pm Mangalore Correspondent ಕರಾವಳಿ
ಮಂಗಳೂರು, ಮೇ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿರುವುದು ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ. ಆ ರೀತಿಯ ಹೇಳಿಕೆ ನೀಡಿರುವ ಹರೀಶ್ ಪೂಂಜ ವಿರುದ್ಧ ಶಿಕ್ಷೆಯಾಗಬೇಕು. ಜೊತೆಗೆ, ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಧರ್ಮಾಧರಿತ ಹತ್ಯೆ ಪ್ರಕರಣಗಳನ್ನು ವಿಶೇಷ ತನಿಖೆಗೆ ಗುರಿಪಡಿಸಬೇಕು. ಅದಕ್ಕಾಗಿ ಈ ಹಿಂದೆ ದಕ್ಷಿಣ ಕನ್ನಡ ಎಸ್ಪಿ ಆಗಿದ್ದ ಸುಬ್ರಹ್ಮಣ್ಯೇಶ್ವರ ರಾವ್ ಅವರಂತಹ ದಕ್ಷ ಅಧಿಕಾರಿಯನ್ನು ತನಿಖೆಗೆ ನೇಮಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಈ ಜಿಲ್ಲೆಯಲ್ಲಿ ಅತಿ ಹೆಚ್ಚು ಧರ್ಮಾಧಾರಿತ ಕೊಲೆಗಳಾಗಿರುವುದು ಎಲ್ಲರಿಗು ಗೊತ್ತಿದೆ. ಇದರಿಂದ ಬಹಳಷ್ಟು ಅಮಾಯಕರು ಸಾವಿಗೀಡಾಗಿದ್ದಾರೆ, ಹಿಂದು- ಮುಸ್ಲಿಮರು ಹತ್ಯೆಯಾಗಿದ್ದಾರೆ. ಯಾವುದೇ ಹತ್ಯೆ ಪ್ರಕರಣಗಳಲ್ಲಿ ಒಬ್ಬನೇ ಒಬ್ಬ ಕಾಂಗ್ರೆಸಿನವರು ಆರೋಪಿಗಳಾಗಿಲ್ಲ. ಬಿಜೆಪಿ, ಇತರ ಧಾರ್ಮಿಕ ಸಂಘಟನೆ ಅಥವಾ ಎಸ್ಡಿಪಿಐನವರು ಆರೋಪಿಗಳಿದ್ದಾರೆ. ಇಂಥ ಘಟನೆಗಳಿಗೆ ಯಾರು ಕಾರಣ, ಯಾರು ಪ್ರೇರಣೆ ನೀಡಿದ್ದಾರೆ ಇತ್ಯಾದಿ ವಿಚಾರಗಳು ತನಿಖೆಯಲ್ಲಿ ಹೊರಬರಬೇಕು. ಆಗಮಾತ್ರ ಈ ಭಾಗದಲ್ಲಿ ನಡೆಯುವ ಧರ್ಮ, ಕೋಮು ವೈಷಮ್ಯದ ಕೊಲೆಗಳಿಗೆ ಫುಲ್ ಸ್ಟಾಪ್ ಬೀಳಬಹುದು ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಹತ್ಯೆಗಳಾಗಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಆ ರೀತಿಯ ಲಕ್ಷಣ ಬಂದಿದೆ ಎನ್ನುತ್ತಾರೆ. ಆದರೆ ಅಂತಹ ಕೃತ್ಯ ನಡೆಸುವುದಕ್ಕೆ ಕಾಂಗ್ರೆಸ್ ಸರ್ಕಾರ ಇರುವಾಗಲೇ ಮತೀಯ ಸಂಘಟನೆಗಳು ಮುಂದಾಗಿರುವುದನ್ನು ನೋಡುತ್ತೇವೆ. ಅದಕ್ಕಾಗಿ ಎಲ್ಲ ರೀತಿಯ ಧರ್ಮಾಧಾರಿತ, ರಾಜಕೀಯ ಪ್ರೇರಿತ ಹತ್ಯೆ ಪ್ರಕರಣಗಳನ್ನು ಮರು ತನಿಖೆ ಮಾಡಬೇಕು. ಇವರ ರಾಜಕೀಯ ಮೇಲಾಟದಲ್ಲಿ ಮುಂದಕ್ಕೆ ಈ ರೀತಿ ಆಗಬಾರದಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ವಿಶೇಷ ತನಿಖಾ ತಂಡ ನೇಮಕಕ್ಕೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು.
ಮುಖ್ಯಮಂತ್ರಿಯನ್ನು ಗುರಿಯಾಗಿಸಿ ಹೆಸರು ಕೆಡಿಸುವ ಪ್ರಯತ್ನಕ್ಕೆ ಕ್ಷಮೆ ಯಾಚನೆ ಸಾಕಾಗಲ್ಲ, ತಪ್ಪೆಂದು ಕಂಡುಬಂದರೆ ಶಿಕ್ಷೆಯಾಗಬೇಕು. ಶಿಕ್ಷೆಯಾದಲ್ಲಿ ಇಂತಹ ಹೇಳಿಕೆ ನೀಡುವವರಿಗೆ ಪಾಠವಾಗುತ್ತದೆ ಎಂದು ರಮಾನಾಥ ರೈ ಹೇಳಿದರು. ಶಶಿಧರ್ ಹೆಗ್ಡೆ, ನವೀನ್ ಡಿಸೋಜ ಮತ್ತಿತರರಿದ್ದರು.
Mla Harish Poonja should apologise publicly for killing remarks on CM Siddaramaiah says Ramanath Rai in Mangalore. Communal killings in the state should be reinvestigated by former SP of Dakshina Kannada Subramanyashwara Rao
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm