ಬ್ರೇಕಿಂಗ್ ನ್ಯೂಸ್
26-05-23 08:03 pm Mangalore Correspondent ಕರಾವಳಿ
ಉಳ್ಳಾಲ, ಮೇ 26 : ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಉಳ್ಳಾಲದ ಕೋಡಿ, ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ ಉಚ್ಚಿಲ- ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಬಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

ಸೋಮೇಶ್ವರ ಉಚ್ಚಿಲ, ಬಟ್ಟಂಪಾಡಿ, ಮುಕ್ಕಚ್ಚೇರಿ ಬಳಿಯ ಸೀಗ್ರೌಂಡ್ ನಲ್ಲಿ ಈ ಬಾರಿ ಮಳೆಗೆ ಕಡಲ್ಕೊರೆತಕ್ಕೆ ಮನೆ, ಆಸ್ತಿ, ಪ್ರಾಣಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ತಾತ್ಕಾಲಿಕ ಕಾಮಗಾರಿಗೂ ಆಗ್ರಹಿಸುತ್ತೇನೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಎಮ್.ಆರ್ ರವಿಕುಮಾರ್, ವಿವಿಧ ಇಲಾಖಾ ಅಧಿಕಾರಿಗಳು, ಜನಪ್ರತಿನಿಧಿಗಳು ಜತೆಗಿದ್ದರು.
Mangalore Speaker MLA UT Khader visits Sea erosion affected areas in ullal, orders for quick work before rains.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm