ಬ್ರೇಕಿಂಗ್ ನ್ಯೂಸ್
26-05-23 08:03 pm Mangalore Correspondent ಕರಾವಳಿ
ಉಳ್ಳಾಲ, ಮೇ 26 : ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಉಳ್ಳಾಲದ ಕೋಡಿ, ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ ಉಚ್ಚಿಲ- ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಬಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

ಸೋಮೇಶ್ವರ ಉಚ್ಚಿಲ, ಬಟ್ಟಂಪಾಡಿ, ಮುಕ್ಕಚ್ಚೇರಿ ಬಳಿಯ ಸೀಗ್ರೌಂಡ್ ನಲ್ಲಿ ಈ ಬಾರಿ ಮಳೆಗೆ ಕಡಲ್ಕೊರೆತಕ್ಕೆ ಮನೆ, ಆಸ್ತಿ, ಪ್ರಾಣಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ತಾತ್ಕಾಲಿಕ ಕಾಮಗಾರಿಗೂ ಆಗ್ರಹಿಸುತ್ತೇನೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಎಮ್.ಆರ್ ರವಿಕುಮಾರ್, ವಿವಿಧ ಇಲಾಖಾ ಅಧಿಕಾರಿಗಳು, ಜನಪ್ರತಿನಿಧಿಗಳು ಜತೆಗಿದ್ದರು.
Mangalore Speaker MLA UT Khader visits Sea erosion affected areas in ullal, orders for quick work before rains.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm