ಬ್ರೇಕಿಂಗ್ ನ್ಯೂಸ್
27-05-23 11:21 am Mangalore Correspondent ಕರಾವಳಿ
ಮಂಗಳೂರು, ಮೇ 27: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಲಾಗಿದ್ದ ತಾತ್ಕಾಲಿಕ ನೇಮಕಾತಿಯ ಉದ್ಯೋಗಕ್ಕೆ ಕತ್ತರಿ ಬಿದ್ದಿದೆ. ಹಿಂದಿನ ಸರಕಾರ ಕೈಗೊಂಡಿದ್ದ ಎಲ್ಲ ರೀತಿಯ ತಾತ್ಕಾಲಿಕ ನೇಮಕಾತಿಗಳನ್ನು ಕಾಂಗ್ರೆಸ್ ಸರಕಾರ ರದ್ದುಪಡಿಸಿರುವುದರಿಂದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ನೀಡಲಾಗಿದ್ದ ಉದ್ಯೋಗವೂ ಕಡಿತಗೊಂಡಿದೆ.
ಕಳೆದ 2022ರ ಸೆಪ್ಟಂಬರ್ ತಿಂಗಳ 22ರಂದು ಪ್ರವೀಣ್ ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಅನುಕಂಪದ ಮೇಲೆ ಉದ್ಯೋಗ ಕಲ್ಪಿಸಲಾಗಿತ್ತು. ಆದೇಶದ ಪ್ರತಿಯಲ್ಲಿ ಮುಖ್ಯಮಂತ್ರಿ ಪದಾಧಿಕಾರ ಇರುವ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಮಾತ್ರ ಎಂದು ಉಲ್ಲೇಖ ಮಾಡಿದ್ದು, ಅದೇ ಈಗ ಮುಳುವಾಗಿದೆ. ರಾಜ್ಯದಲ್ಲಿ ಸರಕಾರ ಬದಲಾಗುತ್ತಿದ್ದಂತೆ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಕತ್ತರಿ ಹಾಕಲಾಗಿದೆ. ಸರಕಾರಿ ಸೇವೆಯಲ್ಲಿದ್ದು ಮೃತಪಟ್ಟ ನೌಕರರ ಪತ್ನಿಯರಿಗೆ ಅರ್ಹತೆ ಆಧಾರದಲ್ಲಿ ನೇಮಕಾತಿ ನಡೆಸುತ್ತಾರೆ. ಅದೇ ರೀತಿ ಪ್ರವೀಣ್ ಪತ್ನಿಗೂ ಉದ್ಯೋಗ ನೇಮಕಾತಿ ಮಾಡಿದ್ದು, ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಅಧಿಕಾರದಲ್ಲಿ ಇರುವವರೆಗೆ ಮಾತ್ರ ಎಂದು ಉಲ್ಲೇಖಿಸಿ ಬಿಜೆಪಿ ಸರಕಾರ ಎಡವಟ್ಟು ಮಾಡಿಕೊಂಡಿದೆ.


ಬೆಂಗಳೂರಿಗೆ ಉದ್ಯೋಗಕ್ಕೆ ಹೋಗುವುದು ಕಷ್ಟ ಎಂಬ ನೆಲೆಯಲ್ಲಿ ಆನಂತರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕುಮಾರಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಅಕ್ಟೋಬರ್ 1ರಿಂದ ಉದ್ಯೋಗ ಸೇರಿದ್ದ ನೂತನ ಕುಮಾರಿಗೆ ಇದೀಗ ನೌಕರಿ ಕಡಿತ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ರವಿಕುಮಾರ್ ಬಳಿ ಕೇಳಿದಾಗ, ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡ ಹುದ್ದೆಗಳು ಸರಕಾರ ಬದಲಾದಾಗ ರದ್ದುಗೊಳ್ಳುವುದು ಸಹಜ ಪ್ರಕ್ರಿಯೆ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಇವರನ್ನು ಮುಂದುವರಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಿಂದ ಕಾರ್ಯಕರ್ತರ ಆಕ್ರೋಶದಿಂದ ತೀವ್ರ ಮುಜುಗರಕ್ಕೀಡಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಪ್ರವೀಣ್ ಪತ್ನಿಗೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿ ಉದ್ಯೋಗ ದೊರಕಿಸುವ ಕೆಲಸ ಮಾಡಿದ್ದರು. ಆದರೆ ತಾತ್ಕಾಲಿಕ ನೇಮಕಾತಿಯಿಂದಾಗಿ ಈಗ ಸರಕಾರ ಬದಲಾಗುತ್ತಿದ್ದಂತೆ ಕೆಲಸ ಕಳಕೊಂಡಿದ್ದು, ಮತ್ತೆ ನಳಿನ್ ಕುಮಾರ್ ಆಕ್ರೋಶಕ್ಕೆ ತುತ್ತಾಗಿದ್ದಾರೆ.
Karnataka congress govt withdraws appointment order of Praveen Nettaru’s wife, after blunder by BJP government in Mangalore. Nutan Kumari, wife of the murdered BJP Yuva Morcha leader, was offered a Group C post on contract basis in the office of former Chief Minister Basavaraj Bommai.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm